ಮನರಂಜನೆ

ಕನಕನಹಳ್ಳಿ ದಾಸೆಗೌಡರ ಮಗ ಕೆಡಿಯಾದಾಗ; ’ಮೈ ನೇಮ್ ಈಸ್ ಕೆಡಿ’ ಟ್ರೇಲರ್ ಬಿಡುಗಡೆ

ಒಂದು ಕಡೆ ಕಾಳಿದಾಸ, ‘ಕೆಡಿ – ದಿ ಡೆವಿಲ್‍’ ಆಗಿ ಹವಾ ಸೃಷ್ಟಿಸುವುದಕ್ಕೆ ನೋಡುತ್ತಿದ್ದರೆ, ಇನ್ನೊಂದು ಕಡೆ ಕನಕನಹಳ್ಳಿ ದಾಸೆಗೌಡರ ಮಗ ‘ಮೈ ನೇಮ್‍ ಈಸ್‍ ಕಡೆ’ ಆಗುವುದಕ್ಕೆ ತಯಾರಿ ನಡೆಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರ ಸಹ ಬಿಡುಗಡೆಯಾಗಲಿದೆ.

ಈ ಹಿಂದೆ ’ಇಂತಿ ನಿಮ್ಮ ಭೈರಾ’ ಚಿತ್ರವನ್ನು ಮಾಡಿದ್ದ ತಂಡವು, ಇದೀಗ ‘ಮೈ ನೇಮ್ ಈಸ್ ಕೆಡಿ’ ಚಿತ್ರ ಮಾಡಿದೆ. SSKB ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟೇಶ್.ಡಿ ನಿರ್ಮಾಣ ಮಾಡಿದ್ದಾರೆ. ಕೆ.ಜೆ.ಚಿಕ್ಕು ನಿರ್ದೇಶನ ಮಾಡಿದ್ದಾರೆ.

ಇದೊಂದು ಕಾಮಿಡಿ ಚಿತ್ರವಾಗಿದ್ದು, ಕನಕಪುರ, ಹೆಸರುಘಟ್ಟ, ಆನೇಕಲ್, ಬೆಂಗಳೂರು ಕಡೆಗಳಲ್ಲಿ 30 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿದ್ದು, ಡಿಸೆಂಬರ್‍ ತಿಂಗಳಲ್ಲಿ ಚಿತ್ರ ಬಿಡುಡೆಯಾಗಲಿದೆ.

ಇದನ್ನೂ ಓದಿ:-‘ಸಾಲಗಾರರ ಸಹಕಾರ ಸಂಘ’ ಎಂಬುದೊಂದಿದೆ; ನಿಮಗೆ ಗೊತ್ತಿದೆಯಾ?

ಈ ಚಿತ್ರದಲ್ಲಿ ಆರ್ಯನ್‌ ವೆಂಕಟೇಶ್ ನಾಯಕನಾಗಿ ಅಭಿನಯಿಸಿದರೆ, ’ಗಿಡುಗ’ದಲ್ಲಿ ಕಾಣಿಸಿಕೊಂಡಿದ್ದ ಭವಾನಿ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಹೊನ್ನವಳ್ಳಿ ಕೃಷ್ಣ, ಗಿರೀಶ್‌ ಜತ್ತಿ, ವಿಶ್ವ, ಯತಿರಾಜ್, ಅರಸು ಮಹಾರಾಜ್, ಸುಪ್ರೀತ್‌ ಕಾಟಿ, ರೋಹಿಣಿ ಮುಂತಾದವರು ನಟಿಸಿದ್ದಾರೆ. ಹಿತನ್ ಹಾಸನ್ ಸಂಗೀತ ಮತ್ತು ಸಂತೋಸ ಪಂಡಿ ಛಾಯಾಗ್ರಹಣವಿದೆ.

ಆರ್ಯನ್‍ ವೆಂಕಟೇಶ್‍ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ‘ಇಂತಿ ನಿಮ್ಮ ಭೈರಾ’ ಸಿನಿಮಾ ಗಳಿಕೆ ಕಡಿಮೆ ಬಂದಿತ್ತು. ಒಟಿಟಿಗೆ ಬಿಟ್ಟಾಗ ಒಳ್ಳೆಯ ಪ್ರತಿಕ್ರಿಯೆ ಬಂದಿತ್ತು. ಇದರ ಸ್ಪೂರ್ತಿಯಿಂದಲೇ ಈಗ ಮತ್ತೊಮ್ಮೆ ಚಿತ್ರ ಮಾಡಿದ್ದೇವೆ. ಕನಕನಹಳ್ಳಿ ದಾಸೆಗೌಡರ ಮಗ ಎಂಬುದನ್ನು ಚಿಕ್ಕದಾಗಿ ಕೆಡಿ ಎಂದು ಹೆಸರನ್ನು ಇಡಲಾಗಿದೆ. ಅಮ್ಮನನ್ನು ಉಳಿಸಿಕೊಳ್ಳುವ ಸಲುವಾಗಿ ಏಳನೇ ತರಗತಿ ಓದುತ್ತಿರುವ ಪುತ್ರನು ಶಾಸಕನ ಬಳಿ ಸಹಾಯಕ್ಕೆ ಹೋಗುತ್ತಾನೆ. ಆದರೆ, ಆತ ಅವಮಾನ ಮಾಡಿ ಕಳಿಸುತ್ತಾನೆ. ಇದರಿಂದ ಕುಪಿತಕೊಂಡು ನಾನು ಮುಂದೆ ಒಳ್ಳೆಯ ರೀತಿಯಲ್ಲಿ ಹಣ ಗಳಿಸಿ MLA ಆಗಬೇಕೆಂದು ಪಣ ತೊಡುತ್ತಾನೆ. ಅದಕ್ಕಾಗಿ ಯಾವ ರೀತಿಯ ಸವಾಲುಗಳನ್ನು ಎದುರಿಸುತ್ತಾನೆ, ಅಂತಿಮವಾಗಿ ತನ್ನ ಹಾದಿಯಲ್ಲಿ ಯಶಸ್ಸು ಗಳಿಸುತ್ತಾನಾ ಎಂಬುದು ಚಿತ್ರದ ಸಾರಾಂಶ’ ಎಂದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

13 mins ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

39 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

4 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

4 hours ago