ಮನರಂಜನೆ

ಕನಕನಹಳ್ಳಿ ದಾಸೆಗೌಡರ ಮಗ ಕೆಡಿಯಾದಾಗ; ’ಮೈ ನೇಮ್ ಈಸ್ ಕೆಡಿ’ ಟ್ರೇಲರ್ ಬಿಡುಗಡೆ

ಒಂದು ಕಡೆ ಕಾಳಿದಾಸ, ‘ಕೆಡಿ – ದಿ ಡೆವಿಲ್‍’ ಆಗಿ ಹವಾ ಸೃಷ್ಟಿಸುವುದಕ್ಕೆ ನೋಡುತ್ತಿದ್ದರೆ, ಇನ್ನೊಂದು ಕಡೆ ಕನಕನಹಳ್ಳಿ ದಾಸೆಗೌಡರ ಮಗ ‘ಮೈ ನೇಮ್‍ ಈಸ್‍ ಕಡೆ’ ಆಗುವುದಕ್ಕೆ ತಯಾರಿ ನಡೆಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರ ಸಹ ಬಿಡುಗಡೆಯಾಗಲಿದೆ.

ಈ ಹಿಂದೆ ’ಇಂತಿ ನಿಮ್ಮ ಭೈರಾ’ ಚಿತ್ರವನ್ನು ಮಾಡಿದ್ದ ತಂಡವು, ಇದೀಗ ‘ಮೈ ನೇಮ್ ಈಸ್ ಕೆಡಿ’ ಚಿತ್ರ ಮಾಡಿದೆ. SSKB ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟೇಶ್.ಡಿ ನಿರ್ಮಾಣ ಮಾಡಿದ್ದಾರೆ. ಕೆ.ಜೆ.ಚಿಕ್ಕು ನಿರ್ದೇಶನ ಮಾಡಿದ್ದಾರೆ.

ಇದೊಂದು ಕಾಮಿಡಿ ಚಿತ್ರವಾಗಿದ್ದು, ಕನಕಪುರ, ಹೆಸರುಘಟ್ಟ, ಆನೇಕಲ್, ಬೆಂಗಳೂರು ಕಡೆಗಳಲ್ಲಿ 30 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿದ್ದು, ಡಿಸೆಂಬರ್‍ ತಿಂಗಳಲ್ಲಿ ಚಿತ್ರ ಬಿಡುಡೆಯಾಗಲಿದೆ.

ಇದನ್ನೂ ಓದಿ:-‘ಸಾಲಗಾರರ ಸಹಕಾರ ಸಂಘ’ ಎಂಬುದೊಂದಿದೆ; ನಿಮಗೆ ಗೊತ್ತಿದೆಯಾ?

ಈ ಚಿತ್ರದಲ್ಲಿ ಆರ್ಯನ್‌ ವೆಂಕಟೇಶ್ ನಾಯಕನಾಗಿ ಅಭಿನಯಿಸಿದರೆ, ’ಗಿಡುಗ’ದಲ್ಲಿ ಕಾಣಿಸಿಕೊಂಡಿದ್ದ ಭವಾನಿ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಹೊನ್ನವಳ್ಳಿ ಕೃಷ್ಣ, ಗಿರೀಶ್‌ ಜತ್ತಿ, ವಿಶ್ವ, ಯತಿರಾಜ್, ಅರಸು ಮಹಾರಾಜ್, ಸುಪ್ರೀತ್‌ ಕಾಟಿ, ರೋಹಿಣಿ ಮುಂತಾದವರು ನಟಿಸಿದ್ದಾರೆ. ಹಿತನ್ ಹಾಸನ್ ಸಂಗೀತ ಮತ್ತು ಸಂತೋಸ ಪಂಡಿ ಛಾಯಾಗ್ರಹಣವಿದೆ.

ಆರ್ಯನ್‍ ವೆಂಕಟೇಶ್‍ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ‘ಇಂತಿ ನಿಮ್ಮ ಭೈರಾ’ ಸಿನಿಮಾ ಗಳಿಕೆ ಕಡಿಮೆ ಬಂದಿತ್ತು. ಒಟಿಟಿಗೆ ಬಿಟ್ಟಾಗ ಒಳ್ಳೆಯ ಪ್ರತಿಕ್ರಿಯೆ ಬಂದಿತ್ತು. ಇದರ ಸ್ಪೂರ್ತಿಯಿಂದಲೇ ಈಗ ಮತ್ತೊಮ್ಮೆ ಚಿತ್ರ ಮಾಡಿದ್ದೇವೆ. ಕನಕನಹಳ್ಳಿ ದಾಸೆಗೌಡರ ಮಗ ಎಂಬುದನ್ನು ಚಿಕ್ಕದಾಗಿ ಕೆಡಿ ಎಂದು ಹೆಸರನ್ನು ಇಡಲಾಗಿದೆ. ಅಮ್ಮನನ್ನು ಉಳಿಸಿಕೊಳ್ಳುವ ಸಲುವಾಗಿ ಏಳನೇ ತರಗತಿ ಓದುತ್ತಿರುವ ಪುತ್ರನು ಶಾಸಕನ ಬಳಿ ಸಹಾಯಕ್ಕೆ ಹೋಗುತ್ತಾನೆ. ಆದರೆ, ಆತ ಅವಮಾನ ಮಾಡಿ ಕಳಿಸುತ್ತಾನೆ. ಇದರಿಂದ ಕುಪಿತಕೊಂಡು ನಾನು ಮುಂದೆ ಒಳ್ಳೆಯ ರೀತಿಯಲ್ಲಿ ಹಣ ಗಳಿಸಿ MLA ಆಗಬೇಕೆಂದು ಪಣ ತೊಡುತ್ತಾನೆ. ಅದಕ್ಕಾಗಿ ಯಾವ ರೀತಿಯ ಸವಾಲುಗಳನ್ನು ಎದುರಿಸುತ್ತಾನೆ, ಅಂತಿಮವಾಗಿ ತನ್ನ ಹಾದಿಯಲ್ಲಿ ಯಶಸ್ಸು ಗಳಿಸುತ್ತಾನಾ ಎಂಬುದು ಚಿತ್ರದ ಸಾರಾಂಶ’ ಎಂದರು.

ಆಂದೋಲನ ಡೆಸ್ಕ್

Recent Posts

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

31 mins ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

4 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

5 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

6 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

7 hours ago