ಮನರಂಜನೆ

‘ಸಂಜು ವೆಡ್ಸ್ ಗೀತಾ 2’ಗೆ ಕಥೆ ಕೊಟ್ಟಿದ್ದು ಯಾರು?

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕಾಗಿ ಕವಿರಾಜ್ ಬರೆದ ‘ಮಳೆಯಂತೇ ಬಾ …’ ಎಂಬ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಸುದೀಪ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಸುದೀಪ್‍ ಈ ಹಾಡನ್ನು ಬಿಡುಗಡೆ ಮಾಡಿರುವುದಷ್ಟೇ ಅಲ್ಲ, ಚಿತ್ರಕ್ಕೆ ಕಥೆಯ ಎಳೆಯನ್ನೂ ಕೊಟ್ಟಿದ್ದಾರಂತೆ. ಈ ವಿಷಯವನ್ನು ಸ್ವತಃ ನಿರ್ದೇಶಕ ನಾಗಶೇಖರ್‍ ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ರೇಶ್ಮೆ ಬೆಳೆಗಾರರ ಕುರಿತ ಒಂದು ಮಹತ್ವದ ವಿಷಯವನ್ನು ಇಟ್ಟುಕೊಂಡು ಈ ಚಿತ್ರ ಮಾಡಿದ್ದೇನೆ. ಅದರ ಜತೆಗೊಂದು ಪ್ರೇಮಕಥೆಯೂ ಸಾಗುತ್ತದೆ. ಈ ಚಿತ್ರದ ಎಳೆಯನ್ನು ಕೊಟ್ಟಿದ್ದು ಸುದೀಪ್. ‘ಮಾಣಿಕ್ಯ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡುವ ಸಂದರ್ಭದಲ್ಲಿ ಅವರು ನನಗೆ ಈ ಎಳೆ ಹೇಳಿದರು. ಇಂಥ ಕಥೆಗಳನ್ನು ನೀನು ಚೆನ್ನಾಗಿ ಮಾಡುತ್ತೀಯ ಎಂದು ನನಗೆ ಒಪ್ಪಿಸಿದ್ದರು. ‘ಸಂಜು ವೆಡ್ಸ್ ಗೀತಾ 2’ ಕಥೆಯ ಕ್ರೆಡಿಟ್ ಸುದೀಪ್ ಅವರಿಗೇ ಸಲ್ಲುತ್ತದೆ. ಇಂದು ನಮ್ಮ ಚಿತ್ರದ ಮೆಲೋಡಿ ಹಾಡನ್ನು ರಿಲೀಸ್ ಮಾಡುವ ಮೂಲಕ ನಮಗೆ ಮತ್ತೊಮ್ಮೆ ಹರಸಿದ್ದಾರೆ’ ಎಂದರು.

ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರಂತೆ. ಶಿಡ್ಲಘಟ್ಟದಲ್ಲಿ ಪ್ರಾರಂಭವಾಗುವ ಕಥೆ ಸ್ವಿಟ್ಜರ್‌ಲ್ಯಾಂಡ್‌ವರೆಗೂ ಹೋಗುತ್ತದಂತೆ. ‘ಚಿತ್ರದಲ್ಲಿ ರೇಶ್ಮೆ ಬೆಳೆಗಾರ ಸಂಜು ಆಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ಗೀತಾ ಪಾತ್ರದಲ್ಲಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಅತಿಹೆಚ್ಚು ರೇಶ್ಮೆ ಬೆಳೆಯುತ್ತಾರೆ. ಆದರೆ, ಅದರ ಕ್ರೆಡಿಟ್ ಬೇರೊಂದು ಕಡೆ ಹೋಗುತ್ತಿದೆ. ಇದೇ ವಿಷಯವನ್ನು ಚಿತ್ರದಲ್ಲಿ ಹೇಳುತ್ತಿದ್ದೇನೆ. ಇದು ಬೇರೆಯದೇ ಶೈಲಿಯ ಸಿನಿಮಾ’ ಎಂದರು.

ಶ್ರೀನಗರ ಕಿಟ್ಟಿ ಮಾತನಾಡಿ, ‘ಚಿತ್ರದಲ್ಲಿ ಪ್ರತಿ ಹಾಡಿಗೂ ಅದರದೇ ಆದ ಪ್ರಾಮುಖ್ಯತೆಯಿದೆ. ಒಂದು ಪ್ರೇಮಕಥೆ, ಅದರೊಂದಿಗೆ ಮುಖ್ಯವಾದ ವಿಷಯ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶ್ರೀಧರ್ ಸುಂದರವಾದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಒಬ್ಬ ರೇಶ್ಮೆ ಬೆಳೆಗಾರನಾಗಿ ನಾನು ಕಾಣಿಸಿಕೊಂಡಿದ್ದೇನೆ’ ಎಂದರು.

ಪವಿತ್ರ ಇಂಟರ್‌ನ್ಯಾಷನಲ್ ಮೂವೀ ಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ ಈ ಚಿತ್ರದಲ್ಲಿ ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ, ಸಂಪತ್ ಮುಂತಾದವರು ನಟಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

12 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

13 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

15 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

15 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

16 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

17 hours ago