ಮನರಂಜನೆ

‘ಸಂಜು ವೆಡ್ಸ್ ಗೀತಾ 2’ಗೆ ಕಥೆ ಕೊಟ್ಟಿದ್ದು ಯಾರು?

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕಾಗಿ ಕವಿರಾಜ್ ಬರೆದ ‘ಮಳೆಯಂತೇ ಬಾ …’ ಎಂಬ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಸುದೀಪ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಸುದೀಪ್‍ ಈ ಹಾಡನ್ನು ಬಿಡುಗಡೆ ಮಾಡಿರುವುದಷ್ಟೇ ಅಲ್ಲ, ಚಿತ್ರಕ್ಕೆ ಕಥೆಯ ಎಳೆಯನ್ನೂ ಕೊಟ್ಟಿದ್ದಾರಂತೆ. ಈ ವಿಷಯವನ್ನು ಸ್ವತಃ ನಿರ್ದೇಶಕ ನಾಗಶೇಖರ್‍ ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ರೇಶ್ಮೆ ಬೆಳೆಗಾರರ ಕುರಿತ ಒಂದು ಮಹತ್ವದ ವಿಷಯವನ್ನು ಇಟ್ಟುಕೊಂಡು ಈ ಚಿತ್ರ ಮಾಡಿದ್ದೇನೆ. ಅದರ ಜತೆಗೊಂದು ಪ್ರೇಮಕಥೆಯೂ ಸಾಗುತ್ತದೆ. ಈ ಚಿತ್ರದ ಎಳೆಯನ್ನು ಕೊಟ್ಟಿದ್ದು ಸುದೀಪ್. ‘ಮಾಣಿಕ್ಯ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡುವ ಸಂದರ್ಭದಲ್ಲಿ ಅವರು ನನಗೆ ಈ ಎಳೆ ಹೇಳಿದರು. ಇಂಥ ಕಥೆಗಳನ್ನು ನೀನು ಚೆನ್ನಾಗಿ ಮಾಡುತ್ತೀಯ ಎಂದು ನನಗೆ ಒಪ್ಪಿಸಿದ್ದರು. ‘ಸಂಜು ವೆಡ್ಸ್ ಗೀತಾ 2’ ಕಥೆಯ ಕ್ರೆಡಿಟ್ ಸುದೀಪ್ ಅವರಿಗೇ ಸಲ್ಲುತ್ತದೆ. ಇಂದು ನಮ್ಮ ಚಿತ್ರದ ಮೆಲೋಡಿ ಹಾಡನ್ನು ರಿಲೀಸ್ ಮಾಡುವ ಮೂಲಕ ನಮಗೆ ಮತ್ತೊಮ್ಮೆ ಹರಸಿದ್ದಾರೆ’ ಎಂದರು.

ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರಂತೆ. ಶಿಡ್ಲಘಟ್ಟದಲ್ಲಿ ಪ್ರಾರಂಭವಾಗುವ ಕಥೆ ಸ್ವಿಟ್ಜರ್‌ಲ್ಯಾಂಡ್‌ವರೆಗೂ ಹೋಗುತ್ತದಂತೆ. ‘ಚಿತ್ರದಲ್ಲಿ ರೇಶ್ಮೆ ಬೆಳೆಗಾರ ಸಂಜು ಆಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ಗೀತಾ ಪಾತ್ರದಲ್ಲಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಅತಿಹೆಚ್ಚು ರೇಶ್ಮೆ ಬೆಳೆಯುತ್ತಾರೆ. ಆದರೆ, ಅದರ ಕ್ರೆಡಿಟ್ ಬೇರೊಂದು ಕಡೆ ಹೋಗುತ್ತಿದೆ. ಇದೇ ವಿಷಯವನ್ನು ಚಿತ್ರದಲ್ಲಿ ಹೇಳುತ್ತಿದ್ದೇನೆ. ಇದು ಬೇರೆಯದೇ ಶೈಲಿಯ ಸಿನಿಮಾ’ ಎಂದರು.

ಶ್ರೀನಗರ ಕಿಟ್ಟಿ ಮಾತನಾಡಿ, ‘ಚಿತ್ರದಲ್ಲಿ ಪ್ರತಿ ಹಾಡಿಗೂ ಅದರದೇ ಆದ ಪ್ರಾಮುಖ್ಯತೆಯಿದೆ. ಒಂದು ಪ್ರೇಮಕಥೆ, ಅದರೊಂದಿಗೆ ಮುಖ್ಯವಾದ ವಿಷಯ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶ್ರೀಧರ್ ಸುಂದರವಾದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಒಬ್ಬ ರೇಶ್ಮೆ ಬೆಳೆಗಾರನಾಗಿ ನಾನು ಕಾಣಿಸಿಕೊಂಡಿದ್ದೇನೆ’ ಎಂದರು.

ಪವಿತ್ರ ಇಂಟರ್‌ನ್ಯಾಷನಲ್ ಮೂವೀ ಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ ಈ ಚಿತ್ರದಲ್ಲಿ ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ, ಸಂಪತ್ ಮುಂತಾದವರು ನಟಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

8 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

9 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

10 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

10 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

11 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

13 hours ago