ಮನರಂಜನೆ

ಯಾರು ‘ಟೆನೆಂಟ್‍’?; ಹೊಸ ಚಿತ್ರದೊಂದಿಗೆ ಬಂದ ಧರ್ಮ ಕೀರ್ತಿರಾಜ್‍

ಹಿರಿಯ ಖಳನಟ ಕೀರ್ತಿರಾಜ್‍ ಅವರ ಮಗ ಧರ್ಮ ಕೀರ್ತಿರಾಜ್‍ ಅಭಿನಯದ ಯಾವೊಂದು ಚಿತ್ರಗಳು ಸಹ ಇತ್ತೀಚಿನ ವರ್ಷಗಳಲ್ಲಿ ಯಶಸ್ವಿಯಾಗಿಲ್ಲ. ಒಂದು ದೊಡ್ಡ ಯಶಸ್ಸಿಗಾಗಿ ಕಾಯುತ್ತಿರುವ ಧರ್ಮ, ಇದೀಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ.

ಈ ಚಿತ್ರದ ಹೆಸರು ‘ಟನೆಂಟ್‍’. ಹಾಗೆಂದರೆ, ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ ಇದೆ. ಮನೆಯೊಂದರಲ್ಲಿ ನಡೆಯುವ ಕ್ರೈಮ್‍ ಥ್ರಿಲ್ಲರ್‍ ಚಿತ್ರ ಇದು. ಧರ್ಮ ಜೊತೆಗೆ ಸೋನು ಗೌಡ ಮತ್ತು ತಿಲಕ್‍ ಸಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದೆ.

‘ಟೆನೆಂಟ್‍’ ಚಿತ್ರವನ್ನು ನಿರ್ದೇಶಿಸಿರುವುದು ಶ್ರೀಧರ್‍ ಶಾಸ್ತ್ರಿ. ವಿ.ಎಫ್.ಎಕ್ಸ್ ನಲ್ಲಿ ನಾಲ್ಕು ವರ್ಷಗಳ ಅನುಭವವಿರುವ ಶ್ರೀಧರ್, ಈಗ ಇದೇ ಮೊದಲ ಬಾರಿಗೆ ‘ಟನೆಂಟ್‍’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮುನ್ನ ಒಂದಿಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಶ್ರೀಧರ್‍, ಇದೇ ಮೊದಲ ಬಾರಿಗೆ ಚಿತ್ರ ನಿರ್ದೇನಕ್ಕೆ ಕೈ ಹಾಕಿದ್ದಾರೆ.

ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ, ‘ಟೆನೆಂಟ್’ ಚಿತ್ರವನ್ನು ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಇನ್ನು, ಶ್ರೀಧರ್ ಶಾಸ್ತ್ರಿ ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.

‘ಟೆನೆಂಟ್‍’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ಸೋನು ಗೌಡ, ತಿಲಕ್‍ ಜೊತೆಗೆ ರಾಕೇಶ್ ಮಯ್ಯ, ‘ಉಗ್ರಂ’ ಮಂಜು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗಿರೀಶ್ ಹೋತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ ಮತ್ತು ಮನೋಹರ್ ಜೋಷಿ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

6 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

8 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

8 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

8 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

8 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

8 hours ago