ಹಿರಿಯ ಖಳನಟ ಕೀರ್ತಿರಾಜ್ ಅವರ ಮಗ ಧರ್ಮ ಕೀರ್ತಿರಾಜ್ ಅಭಿನಯದ ಯಾವೊಂದು ಚಿತ್ರಗಳು ಸಹ ಇತ್ತೀಚಿನ ವರ್ಷಗಳಲ್ಲಿ ಯಶಸ್ವಿಯಾಗಿಲ್ಲ. ಒಂದು ದೊಡ್ಡ ಯಶಸ್ಸಿಗಾಗಿ ಕಾಯುತ್ತಿರುವ ಧರ್ಮ, ಇದೀಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ.
ಈ ಚಿತ್ರದ ಹೆಸರು ‘ಟನೆಂಟ್’. ಹಾಗೆಂದರೆ, ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ ಇದೆ. ಮನೆಯೊಂದರಲ್ಲಿ ನಡೆಯುವ ಕ್ರೈಮ್ ಥ್ರಿಲ್ಲರ್ ಚಿತ್ರ ಇದು. ಧರ್ಮ ಜೊತೆಗೆ ಸೋನು ಗೌಡ ಮತ್ತು ತಿಲಕ್ ಸಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದೆ.
‘ಟೆನೆಂಟ್’ ಚಿತ್ರವನ್ನು ನಿರ್ದೇಶಿಸಿರುವುದು ಶ್ರೀಧರ್ ಶಾಸ್ತ್ರಿ. ವಿ.ಎಫ್.ಎಕ್ಸ್ ನಲ್ಲಿ ನಾಲ್ಕು ವರ್ಷಗಳ ಅನುಭವವಿರುವ ಶ್ರೀಧರ್, ಈಗ ಇದೇ ಮೊದಲ ಬಾರಿಗೆ ‘ಟನೆಂಟ್’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮುನ್ನ ಒಂದಿಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಶ್ರೀಧರ್, ಇದೇ ಮೊದಲ ಬಾರಿಗೆ ಚಿತ್ರ ನಿರ್ದೇನಕ್ಕೆ ಕೈ ಹಾಕಿದ್ದಾರೆ.
ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ, ‘ಟೆನೆಂಟ್’ ಚಿತ್ರವನ್ನು ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಇನ್ನು, ಶ್ರೀಧರ್ ಶಾಸ್ತ್ರಿ ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.
‘ಟೆನೆಂಟ್’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ಸೋನು ಗೌಡ, ತಿಲಕ್ ಜೊತೆಗೆ ರಾಕೇಶ್ ಮಯ್ಯ, ‘ಉಗ್ರಂ’ ಮಂಜು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗಿರೀಶ್ ಹೋತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ ಮತ್ತು ಮನೋಹರ್ ಜೋಷಿ ಛಾಯಾಗ್ರಹಣವಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…