‘ಬಿಗ್ ಬಾಸ್’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ.
ಸರಿ, ಈ ಬಾರಿ ‘ಬಿಗ್ ಬಾಸ್’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಸಾಮಾನ್ಯವಾಗಿ ಕಾರ್ಯಕ್ರಮಕ್ಕೂ ಮೊದಲು ಚಾನಲ್ನವರು ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಾರೆ ಎಂಬ ವಿಷಯವನ್ನು ಎಲ್ಲೂ ಬಹಿರಂಗಪಡಿಸಿಲ್ಲ. ಈ ಬಾರಿಯೂ ಅದು ಮುಂದುವರೆದಿದೆ. ಈ ಮಧ್ಯೆ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸಬಹುದು ಎಂಬ ಚರ್ಚೆ ಶುರುವಾಗಿದ್ದು, ಒಂದಿಷ್ಟು ಹೆಸರುಗಳು ಕೇಳಿ ಬಂದಿವೆ.
ಪ್ರಮುಖವಾಗಿ, ನಟಿ ಪ್ರೇಮಾ, ಅವಳಿ ಸಹೋದರಿಯರಾದ ಅದ್ವಿತಿ ಶೆಟ್ಟಿ ಮತ್ತು ಅಶ್ವಿತಿ ಶೆಟ್ಟಿ, ‘ಗೀತಾ’ ಧಾರಾವಾಹಿ ಖ್ಯಾತಿಯ ಭವ್ಯ ಗೌಡ, ಗಾಯಕಿ ಐಶ್ವರ್ಯಾ ರಂಗರಾಜನ್, ಸುದ್ದಿ ನಿರೂಪಕ ಹರೀಶ್ ನಾಗರಾಜ್, ‘ಗಿಚ್ಚಿ ಗಿಲಿಗಿಲಿ – ಸೀಸನ್ 3’ರ ವಿಜೇತ ಹುಲಿ ಕಾರ್ತಿಕ್, ತುಕಾಲಿ ಸಂತು ಪತ್ನಿ ಮಾನಸ ತಂತು, ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ, ‘ಸತ್ಯ’ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಜ್ಯೂನಿಯರ್ ದರ್ಶನ್ ಎಂದು ಖ್ಯಾತಿ ಪಡೆದಿರುವ ಅವಿನಾಶ್, ರೈಡರ್ ಲೇಖಿ ಗೋಸ್ವಾಮಿ ಮುಂತಾದವರ ಹೆಸರುಗಳು ಕೇಳಿಬರುತ್ತಿವೆ. ಇವೆಲ್ಲವೂ ಎಷ್ಟು ಜನ ನಿಜಕ್ಕೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಅಥವಾ ಎಷ್ಟು ಜನರ ಹೆಸರು ಸುಳ್ಳೇ ಕೇಳಿ ಬರುತ್ತಿದೆ ಎಂದು ಕಾರ್ಯಕ್ರಮ ಶುರುವಾದಾಗಲೇ ಗೊತ್ತಾಗಬೇಕು.
ಇನ್ನು, ಸೋಮವಾರ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ಯಾವುದೇ ಕಾರಣಕ್ಕೂ ಉದ್ಘಾಟನಾ ಕಾರ್ಯಕ್ರಮದವರೆಗೂ ತಮಗೆ ಸ್ಪರ್ಧಿಗಳ ಹೆಸರು ಹೇಳಬೇಡಿ ಎಂದು ಚಾನಲ್ನವರಿಗೆ ಹೇಳುತ್ತೇನೆ ಎಂದರು. ‘ಒಂದು ಪಕ್ಷ ಸ್ಪರ್ಧಿಗಳ ಹೆಸರುಗಳು ಲೀಕ್ ಆದರೆ, ನನ್ನಿಂದ ಆಗಿರಬಹುದು ಎಂದು ಅವರಿಗೆ ಅನ್ನಿಸಬಾರದು. ಹಾಗಾಗಿ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ವಿಷಯಗಳನ್ನು ನಾನು ತಿಳಿದುಕೊಳ್ಳುವುದಕ್ಕೆ ಹೋಗುವುದಿಲ್ಲ. ಉದ್ಘಾಟನಾ ದಿನದಂದೇ ನೇರವಾಗಿ ತಿಳಿದುಕೊಳ್ಳುತ್ತೇನೆ’ ಎಂದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…