‘ಬಿಗ್ ಬಾಸ್’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ.
ಸರಿ, ಈ ಬಾರಿ ‘ಬಿಗ್ ಬಾಸ್’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಸಾಮಾನ್ಯವಾಗಿ ಕಾರ್ಯಕ್ರಮಕ್ಕೂ ಮೊದಲು ಚಾನಲ್ನವರು ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಾರೆ ಎಂಬ ವಿಷಯವನ್ನು ಎಲ್ಲೂ ಬಹಿರಂಗಪಡಿಸಿಲ್ಲ. ಈ ಬಾರಿಯೂ ಅದು ಮುಂದುವರೆದಿದೆ. ಈ ಮಧ್ಯೆ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸಬಹುದು ಎಂಬ ಚರ್ಚೆ ಶುರುವಾಗಿದ್ದು, ಒಂದಿಷ್ಟು ಹೆಸರುಗಳು ಕೇಳಿ ಬಂದಿವೆ.
ಪ್ರಮುಖವಾಗಿ, ನಟಿ ಪ್ರೇಮಾ, ಅವಳಿ ಸಹೋದರಿಯರಾದ ಅದ್ವಿತಿ ಶೆಟ್ಟಿ ಮತ್ತು ಅಶ್ವಿತಿ ಶೆಟ್ಟಿ, ‘ಗೀತಾ’ ಧಾರಾವಾಹಿ ಖ್ಯಾತಿಯ ಭವ್ಯ ಗೌಡ, ಗಾಯಕಿ ಐಶ್ವರ್ಯಾ ರಂಗರಾಜನ್, ಸುದ್ದಿ ನಿರೂಪಕ ಹರೀಶ್ ನಾಗರಾಜ್, ‘ಗಿಚ್ಚಿ ಗಿಲಿಗಿಲಿ – ಸೀಸನ್ 3’ರ ವಿಜೇತ ಹುಲಿ ಕಾರ್ತಿಕ್, ತುಕಾಲಿ ಸಂತು ಪತ್ನಿ ಮಾನಸ ತಂತು, ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ, ‘ಸತ್ಯ’ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಜ್ಯೂನಿಯರ್ ದರ್ಶನ್ ಎಂದು ಖ್ಯಾತಿ ಪಡೆದಿರುವ ಅವಿನಾಶ್, ರೈಡರ್ ಲೇಖಿ ಗೋಸ್ವಾಮಿ ಮುಂತಾದವರ ಹೆಸರುಗಳು ಕೇಳಿಬರುತ್ತಿವೆ. ಇವೆಲ್ಲವೂ ಎಷ್ಟು ಜನ ನಿಜಕ್ಕೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಅಥವಾ ಎಷ್ಟು ಜನರ ಹೆಸರು ಸುಳ್ಳೇ ಕೇಳಿ ಬರುತ್ತಿದೆ ಎಂದು ಕಾರ್ಯಕ್ರಮ ಶುರುವಾದಾಗಲೇ ಗೊತ್ತಾಗಬೇಕು.
ಇನ್ನು, ಸೋಮವಾರ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ಯಾವುದೇ ಕಾರಣಕ್ಕೂ ಉದ್ಘಾಟನಾ ಕಾರ್ಯಕ್ರಮದವರೆಗೂ ತಮಗೆ ಸ್ಪರ್ಧಿಗಳ ಹೆಸರು ಹೇಳಬೇಡಿ ಎಂದು ಚಾನಲ್ನವರಿಗೆ ಹೇಳುತ್ತೇನೆ ಎಂದರು. ‘ಒಂದು ಪಕ್ಷ ಸ್ಪರ್ಧಿಗಳ ಹೆಸರುಗಳು ಲೀಕ್ ಆದರೆ, ನನ್ನಿಂದ ಆಗಿರಬಹುದು ಎಂದು ಅವರಿಗೆ ಅನ್ನಿಸಬಾರದು. ಹಾಗಾಗಿ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ವಿಷಯಗಳನ್ನು ನಾನು ತಿಳಿದುಕೊಳ್ಳುವುದಕ್ಕೆ ಹೋಗುವುದಿಲ್ಲ. ಉದ್ಘಾಟನಾ ದಿನದಂದೇ ನೇರವಾಗಿ ತಿಳಿದುಕೊಳ್ಳುತ್ತೇನೆ’ ಎಂದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…