‘ಬಿಗ್ ಬಾಸ್’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ.
ಸರಿ, ಈ ಬಾರಿ ‘ಬಿಗ್ ಬಾಸ್’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಸಾಮಾನ್ಯವಾಗಿ ಕಾರ್ಯಕ್ರಮಕ್ಕೂ ಮೊದಲು ಚಾನಲ್ನವರು ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಾರೆ ಎಂಬ ವಿಷಯವನ್ನು ಎಲ್ಲೂ ಬಹಿರಂಗಪಡಿಸಿಲ್ಲ. ಈ ಬಾರಿಯೂ ಅದು ಮುಂದುವರೆದಿದೆ. ಈ ಮಧ್ಯೆ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸಬಹುದು ಎಂಬ ಚರ್ಚೆ ಶುರುವಾಗಿದ್ದು, ಒಂದಿಷ್ಟು ಹೆಸರುಗಳು ಕೇಳಿ ಬಂದಿವೆ.
ಪ್ರಮುಖವಾಗಿ, ನಟಿ ಪ್ರೇಮಾ, ಅವಳಿ ಸಹೋದರಿಯರಾದ ಅದ್ವಿತಿ ಶೆಟ್ಟಿ ಮತ್ತು ಅಶ್ವಿತಿ ಶೆಟ್ಟಿ, ‘ಗೀತಾ’ ಧಾರಾವಾಹಿ ಖ್ಯಾತಿಯ ಭವ್ಯ ಗೌಡ, ಗಾಯಕಿ ಐಶ್ವರ್ಯಾ ರಂಗರಾಜನ್, ಸುದ್ದಿ ನಿರೂಪಕ ಹರೀಶ್ ನಾಗರಾಜ್, ‘ಗಿಚ್ಚಿ ಗಿಲಿಗಿಲಿ – ಸೀಸನ್ 3’ರ ವಿಜೇತ ಹುಲಿ ಕಾರ್ತಿಕ್, ತುಕಾಲಿ ಸಂತು ಪತ್ನಿ ಮಾನಸ ತಂತು, ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ, ‘ಸತ್ಯ’ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಜ್ಯೂನಿಯರ್ ದರ್ಶನ್ ಎಂದು ಖ್ಯಾತಿ ಪಡೆದಿರುವ ಅವಿನಾಶ್, ರೈಡರ್ ಲೇಖಿ ಗೋಸ್ವಾಮಿ ಮುಂತಾದವರ ಹೆಸರುಗಳು ಕೇಳಿಬರುತ್ತಿವೆ. ಇವೆಲ್ಲವೂ ಎಷ್ಟು ಜನ ನಿಜಕ್ಕೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಅಥವಾ ಎಷ್ಟು ಜನರ ಹೆಸರು ಸುಳ್ಳೇ ಕೇಳಿ ಬರುತ್ತಿದೆ ಎಂದು ಕಾರ್ಯಕ್ರಮ ಶುರುವಾದಾಗಲೇ ಗೊತ್ತಾಗಬೇಕು.
ಇನ್ನು, ಸೋಮವಾರ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ಯಾವುದೇ ಕಾರಣಕ್ಕೂ ಉದ್ಘಾಟನಾ ಕಾರ್ಯಕ್ರಮದವರೆಗೂ ತಮಗೆ ಸ್ಪರ್ಧಿಗಳ ಹೆಸರು ಹೇಳಬೇಡಿ ಎಂದು ಚಾನಲ್ನವರಿಗೆ ಹೇಳುತ್ತೇನೆ ಎಂದರು. ‘ಒಂದು ಪಕ್ಷ ಸ್ಪರ್ಧಿಗಳ ಹೆಸರುಗಳು ಲೀಕ್ ಆದರೆ, ನನ್ನಿಂದ ಆಗಿರಬಹುದು ಎಂದು ಅವರಿಗೆ ಅನ್ನಿಸಬಾರದು. ಹಾಗಾಗಿ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ವಿಷಯಗಳನ್ನು ನಾನು ತಿಳಿದುಕೊಳ್ಳುವುದಕ್ಕೆ ಹೋಗುವುದಿಲ್ಲ. ಉದ್ಘಾಟನಾ ದಿನದಂದೇ ನೇರವಾಗಿ ತಿಳಿದುಕೊಳ್ಳುತ್ತೇನೆ’ ಎಂದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…