‘ಬಿಗ್ ಬಾಸ್’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ.
ಸರಿ, ಈ ಬಾರಿ ‘ಬಿಗ್ ಬಾಸ್’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಸಾಮಾನ್ಯವಾಗಿ ಕಾರ್ಯಕ್ರಮಕ್ಕೂ ಮೊದಲು ಚಾನಲ್ನವರು ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಾರೆ ಎಂಬ ವಿಷಯವನ್ನು ಎಲ್ಲೂ ಬಹಿರಂಗಪಡಿಸಿಲ್ಲ. ಈ ಬಾರಿಯೂ ಅದು ಮುಂದುವರೆದಿದೆ. ಈ ಮಧ್ಯೆ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸಬಹುದು ಎಂಬ ಚರ್ಚೆ ಶುರುವಾಗಿದ್ದು, ಒಂದಿಷ್ಟು ಹೆಸರುಗಳು ಕೇಳಿ ಬಂದಿವೆ.
ಪ್ರಮುಖವಾಗಿ, ನಟಿ ಪ್ರೇಮಾ, ಅವಳಿ ಸಹೋದರಿಯರಾದ ಅದ್ವಿತಿ ಶೆಟ್ಟಿ ಮತ್ತು ಅಶ್ವಿತಿ ಶೆಟ್ಟಿ, ‘ಗೀತಾ’ ಧಾರಾವಾಹಿ ಖ್ಯಾತಿಯ ಭವ್ಯ ಗೌಡ, ಗಾಯಕಿ ಐಶ್ವರ್ಯಾ ರಂಗರಾಜನ್, ಸುದ್ದಿ ನಿರೂಪಕ ಹರೀಶ್ ನಾಗರಾಜ್, ‘ಗಿಚ್ಚಿ ಗಿಲಿಗಿಲಿ – ಸೀಸನ್ 3’ರ ವಿಜೇತ ಹುಲಿ ಕಾರ್ತಿಕ್, ತುಕಾಲಿ ಸಂತು ಪತ್ನಿ ಮಾನಸ ತಂತು, ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ, ‘ಸತ್ಯ’ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಜ್ಯೂನಿಯರ್ ದರ್ಶನ್ ಎಂದು ಖ್ಯಾತಿ ಪಡೆದಿರುವ ಅವಿನಾಶ್, ರೈಡರ್ ಲೇಖಿ ಗೋಸ್ವಾಮಿ ಮುಂತಾದವರ ಹೆಸರುಗಳು ಕೇಳಿಬರುತ್ತಿವೆ. ಇವೆಲ್ಲವೂ ಎಷ್ಟು ಜನ ನಿಜಕ್ಕೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಅಥವಾ ಎಷ್ಟು ಜನರ ಹೆಸರು ಸುಳ್ಳೇ ಕೇಳಿ ಬರುತ್ತಿದೆ ಎಂದು ಕಾರ್ಯಕ್ರಮ ಶುರುವಾದಾಗಲೇ ಗೊತ್ತಾಗಬೇಕು.
ಇನ್ನು, ಸೋಮವಾರ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ಯಾವುದೇ ಕಾರಣಕ್ಕೂ ಉದ್ಘಾಟನಾ ಕಾರ್ಯಕ್ರಮದವರೆಗೂ ತಮಗೆ ಸ್ಪರ್ಧಿಗಳ ಹೆಸರು ಹೇಳಬೇಡಿ ಎಂದು ಚಾನಲ್ನವರಿಗೆ ಹೇಳುತ್ತೇನೆ ಎಂದರು. ‘ಒಂದು ಪಕ್ಷ ಸ್ಪರ್ಧಿಗಳ ಹೆಸರುಗಳು ಲೀಕ್ ಆದರೆ, ನನ್ನಿಂದ ಆಗಿರಬಹುದು ಎಂದು ಅವರಿಗೆ ಅನ್ನಿಸಬಾರದು. ಹಾಗಾಗಿ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ವಿಷಯಗಳನ್ನು ನಾನು ತಿಳಿದುಕೊಳ್ಳುವುದಕ್ಕೆ ಹೋಗುವುದಿಲ್ಲ. ಉದ್ಘಾಟನಾ ದಿನದಂದೇ ನೇರವಾಗಿ ತಿಳಿದುಕೊಳ್ಳುತ್ತೇನೆ’ ಎಂದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…