ಮನರಂಜನೆ

ಈ ಬಾರಿ ‘ಬಿಗ್‍ ಬಾಸ್‍’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಾರೆ?

‘ಬಿಗ್‍ ಬಾಸ್‍’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್‍ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ.

ಸರಿ, ಈ ಬಾರಿ ‘ಬಿಗ್‍ ಬಾಸ್‍’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಸಾಮಾನ್ಯವಾಗಿ ಕಾರ್ಯಕ್ರಮಕ್ಕೂ ಮೊದಲು ಚಾನಲ್‍ನವರು ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಾರೆ ಎಂಬ ವಿಷಯವನ್ನು ಎಲ್ಲೂ ಬಹಿರಂಗಪಡಿಸಿಲ್ಲ. ಈ ಬಾರಿಯೂ ಅದು ಮುಂದುವರೆದಿದೆ. ಈ ಮಧ್ಯೆ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸಬಹುದು ಎಂಬ ಚರ್ಚೆ ಶುರುವಾಗಿದ್ದು, ಒಂದಿಷ್ಟು ಹೆಸರುಗಳು ಕೇಳಿ ಬಂದಿವೆ.

ಪ್ರಮುಖವಾಗಿ, ನಟಿ ಪ್ರೇಮಾ, ಅವಳಿ ಸಹೋದರಿಯರಾದ ಅದ್ವಿತಿ ಶೆಟ್ಟಿ ಮತ್ತು ಅಶ್ವಿತಿ ಶೆಟ್ಟಿ, ‘ಗೀತಾ’ ಧಾರಾವಾಹಿ ಖ್ಯಾತಿಯ ಭವ್ಯ ಗೌಡ, ಗಾಯಕಿ ಐಶ್ವರ್ಯಾ ರಂಗರಾಜನ್‍, ಸುದ್ದಿ ನಿರೂಪಕ ಹರೀಶ್‍ ನಾಗರಾಜ್‍, ‘ಗಿಚ್ಚಿ ಗಿಲಿಗಿಲಿ – ಸೀಸನ್‍ 3’ರ ವಿಜೇತ ಹುಲಿ ಕಾರ್ತಿಕ್, ತುಕಾಲಿ ಸಂತು ಪತ್ನಿ ಮಾನಸ ತಂತು, ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ, ‘ಸತ್ಯ’ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್‍, ಜ್ಯೂನಿಯರ್‍ ದರ್ಶನ್‍ ಎಂದು ಖ್ಯಾತಿ ಪಡೆದಿರುವ ಅವಿನಾಶ್‍, ರೈಡರ್‍ ಲೇಖಿ ಗೋಸ್ವಾಮಿ ಮುಂತಾದವರ ಹೆಸರುಗಳು ಕೇಳಿಬರುತ್ತಿವೆ. ಇವೆಲ್ಲವೂ ಎಷ್ಟು ಜನ ನಿಜಕ್ಕೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಅಥವಾ ಎಷ್ಟು ಜನರ ಹೆಸರು ಸುಳ್ಳೇ ಕೇಳಿ ಬರುತ್ತಿದೆ ಎಂದು ಕಾರ್ಯಕ್ರಮ ಶುರುವಾದಾಗಲೇ ಗೊತ್ತಾಗಬೇಕು.

ಇನ್ನು, ಸೋಮವಾರ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್‍, ಯಾವುದೇ ಕಾರಣಕ್ಕೂ ಉದ್ಘಾಟನಾ ಕಾರ್ಯಕ್ರಮದವರೆಗೂ ತಮಗೆ ಸ್ಪರ್ಧಿಗಳ ಹೆಸರು ಹೇಳಬೇಡಿ ಎಂದು ಚಾನಲ್‍ನವರಿಗೆ ಹೇಳುತ್ತೇನೆ ಎಂದರು. ‘ಒಂದು ಪಕ್ಷ ಸ್ಪರ್ಧಿಗಳ ಹೆಸರುಗಳು ಲೀಕ್‍ ಆದರೆ, ನನ್ನಿಂದ ಆಗಿರಬಹುದು ಎಂದು ಅವರಿಗೆ ಅನ್ನಿಸಬಾರದು. ಹಾಗಾಗಿ, ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ ಎಂಬ ವಿಷಯಗಳನ್ನು ನಾನು ತಿಳಿದುಕೊಳ್ಳುವುದಕ್ಕೆ ಹೋಗುವುದಿಲ್ಲ. ಉದ್ಘಾಟನಾ ದಿನದಂದೇ ನೇರವಾಗಿ ತಿಳಿದುಕೊಳ್ಳುತ್ತೇನೆ’ ಎಂದರು.

ಭೂಮಿಕಾ

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

2 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

4 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

12 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

14 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

15 hours ago