ಮನರಂಜನೆ

‘ಬಿಗ್‍ ಬಾಸ್‍’ ನಡೆಸಿಕೊಡಲು ಸುದೀಪ್‍ ವಾಪಸ್ಸಾಗಿದ್ದು ಏಕೆ?

ಕಳೆದ ವರ್ಷ ನಡೆದ ‘ಬಿಗ್‍ ಬಾಸ್‍’ ಕಾರ್ಯಕ್ರಮವೇ ತಮ್ಮ ಕೊನೆಯ ‘ಬಿಗ್‍ ಬಾಸ್‍’ ಆಗಿರಲಿದೆ ಎಂದು ಸುದೀಪ್‍ ಹೇಳಿಕೊಂಡಿದ್ದರು. ಆದರೆ, ‘ಬಿಗ್‍ ಬಾಸ್’ ಕಾರ್ಯಕ್ರಮದ 12ನೇ ಅವತರಣಿಕೆಯನ್ನು ಸುದೀಪ್‍ ಈ ವರ್ಷ ನಡೆಸಿಕೊಡುವುದಷ್ಟೇ ಅಲ್ಲ, ಇನ್ನೂ ನಾಲ್ಕು ಸೀಸನ್‍ಗಳ ನಿರೂಪಣೆ ಮಾಡಲಿದ್ದಾರಂತೆ. ನಡೆಸಿಕೊಡುವುದಿಲ್ಲ ಎಂದು ಹೇಳಿದ್ದ ಸುದೀಪ್‍, ಕಾರ್ಯಕ್ರಮದ ನಿರೂಪಣೆಗೆ ವಾಪಸ್ಸಾಗಿದ್ದೇಕೆ?

ಈ ಕುರಿತು ಇತ್ತೀಚೆಗೆ ಕಾರ್ಯಕ್ರಮದ ಘೋಷಣೆ ಸಂದರ್ಭದಲ್ಲಿ ಮಾತನಾಡಿರುವ ಸುದೀಪ್‍, ‘ನಾನು ವಾಪಸ್ಸು ಬರುತ್ತಿರುವುದಕ್ಕೆ ಕಾರಣವಿದೆ. ಅದಕ್ಕೆ ಮುಖ್ಯ ಕಾರಣ, ಜನರ ಪ್ರೀತಿ. ಬಹಳಷ್ಟು ಜನ ನಾನು ಕಾರ್ಯಕ್ರಮವನ್ನು ಮುಂದುವರೆಸಬೇಕು ಎಂದು ಆಸೆಪಟ್ಟಿದ್ದಾರೆ. ಕಾರ್ಯಕ್ರಮವನ್ನು ತಂಡ ನಡೆಸಿಕೊಡುತ್ತಿರುವ ರೀತಿ, ಅದು ಬೆಳೆಯುತ್ತಿರುವ ರೀತಿ, ಜನ ಅದನ್ನು ಪ್ರೀತಿಯಿಂದ ನೋಡುತ್ತಿರುವ ರೀತಿ. ಇವೆಲ್ಲವೂ ನಾನು ವಾಪಸ್ಸು ಬರುತ್ತಿರುವುದಕ್ಕೆ ಕಾರಣಗಳು ಎಂದರು.

ಇಷ್ಟಕ್ಕೂ ಸುದೀಪ್‍ ಕಾರ್ಯಕ್ರಮದಿಂದ ಹೊರನಡೆಯುವುದಕ್ಕೆ ತೀರ್ಮಾನಿಸಿದ್ದು ಯಾಕೆ? ಈ ಕುರಿತು ಮಾತನಾಡಿರುವ ಅವರು, ಬಿಗ್‍ ಬಾಸ್ ಕಾರ್ಯಕ್ರಮ ಬರೀ ಕನ್ನಡದಲ್ಲಿ ಮಾತ್ರವಲ್ಲ, ಬೇರೆ ಭಾಷೆಗಳಲ್ಲೂ ಪ್ರಸಾರವಾಗುತ್ತಿದೆ. ಬೇರೆ ಭಾಷೆಗಳಲ್ಲಿ ಸ್ಪರ್ಧಿಗಳಿಗೆ ಕೊಡುವ ಸೌಲಭ್ಯ ಇಲ್ಲೂ ಕೊಡಿ ಎಂಬುದು ನನ್ನ ಮೊದಲ ಬೇಡಿಕೆಯಾಗಿತ್ತು. ಕನ್ನಡದ ‘ಬಿಗ್‍ ಬಾಸ್‍’ ಒಳ‍್ಳೆಯ ಫಲಿತಾಂಶವನ್ನು ಕೊಟ್ಟಿದೆ. ಟಿಆರ್‌ಪಿಯಲ್ಲಿ ದಾಖಲೆ ಮಾಡಿದೆ. ಹಾಗಾಗಿ, ಇಲ್ಲಿನ ಕಾರ್ಯಕ್ರಮಕ್ಕೂ ಹೆಚ್ಚಿನ ಪ್ರಾಮುಖ್ಯತೆ ಕೊಡಿ ಎಂದು ಹೇಳಿದ್ದೆ. ಅದಕ್ಕೆ ಚಾನಲ್‍ನವರು ಸೂಕ್ತವಾಗಿ ಸ್ಪಂದಿಸಿದ್ದರಿಂದ ನಾನು ಕಾರ್ಯಕ್ರಮಕ್ಕೆ ವಾಪಸ್ಸಾದೆ’ ಎಂದರು.

‘ಬಿಗ್ ಬಾಸ್‍ – ಸೀಸನ್‍ 12’ ಕಾರ್ಯಕ್ರಮದ ಬಗ್ಗೆ ಅಧಿಕೃತವಾಗಿ ಘೋಷಣೆಯಾಗಿದೆಯಾದರೂ, ಕಾರ್ಯಕ್ರಮ ಶುರುವಾಗುವುದಕ್ಕೆ ಇನ್ನೂ ಸಮಯವಿದೆ. ಸುದೀಪ್‍ ಅಭಿನಯದ ಹೊಸ ಚಿತ್ರ ‘ಮ್ಯಾಕ್ಸ್ 2’ ಸದ್ಯದಲ್ಲೇ ಪ್ರಾರಂಭವಾಗಲಿದೆ. ಅದರ ಚಿತ್ರೀಕರಣ ಮುಗಿದೆ ನಂತರ, ‘ಬಿಗ್‍ ಬಾಸ್‍ – ಸೀಸನ್‍ 12’ ಶುರುವಾಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

51 mins ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

1 hour ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

3 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

3 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

5 hours ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

8 hours ago