Categories: ಮನರಂಜನೆ

ಮಹಾಕ್ಷಯ್‍ ಸಸ್ಪೆಂಡ್‍ ಆಗಿದ್ದು ಯಾಕೆ? ಉತ್ತರ ‘ಮ್ಯಾಕ್ಸ್ 2’ನಲ್ಲಿ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರ ನೆನಪಿರಬಹುದು. ಅದರಲ್ಲಿ ಅವರು ಮಹಾಕ್ಷಯ್‍ ಎಂಬ ಪೊಲೀಸ್‍ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾನತ್ತಿಗೊಳಗಾಗಿರುವ ಅವರು ಅದನ್ನು ಮುಗಿಸಿ ಬಂದಿರುತ್ತಾರೆ. ಇಷ್ಟಕ್ಕೂ ಚಿತ್ರದಲ್ಲಿ ಸುದೀಪ್‍ ಯಾಕೆ ಸಸ್ಪೆಂಡ್‍ ಆಗಿರುತ್ತಾರೆ?

ಆ ಕಥೆಯನ್ನು ಹೇಳುವುದಕ್ಕೆ ಇದೀಗ ‘ಮ್ಯಾಕ್ಸ್ 2’ ಚಿತ್ರ ತಯಾರಾಗುತ್ತಿದೆ. ಕಳೆದ ವರ್ಷ ಬಿಡುಗಡೆಯಾದ ‘ಮ್ಯಾಕ್ಸ್’, ಯಶಸ್ವಿಯಾದ ಹಿನ್ನೆಲೆಯಲ್ಲಿ, ಚಿತ್ರದ ಮುಂದುವರೆದ ಭಾಗ ಬರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಈಗ ಅದು ನಿಜವಾಗಿದೆ. ‘ಮ್ಯಾಕ್ಸ್ 2’ ಬರುವುದು ನಿಜವಾಗಿದ್ದು, ಸದ್ಯದಲ್ಲೇ ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

‘ಮ್ಯಾಕ್ಸ್ 2’ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಈ ಚಿತ್ರವನ್ನು ಮೊದಲ ಭಾಗ ನಿರ್ದೇಶಿಸಿದ್ದ ವಿಜಯ್‍ ಕಾರ್ತಿಕೇಯ ಅವರೇ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ. ಮೊದಲ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್. ಧಾನು ಮತ್ತು ಸುದೀಪ್‍ ಜೊತೆಯಾಗಿ ನಿರ್ಮಾಣ ಮಾಡಿದ್ದರು. ‘ಮ್ಯಾಕ್ಸ್ 2’ ಚಿತ್ರವನ್ನು ಯಾರು ನಿರ್ಮಾಣ ಮಾಡಲಿದ್ದಾರೆ ಎಂಬ ವಿಷಯ ಸದ್ಯದಲ್ಲೇ ಹೊರಬೀಳಲಿದೆ. ಈ ಚಿತ್ರದಲ್ಲಿ ಸುದೀಪ್‍ ತಮ್ಮ ಮಹಾಕ್ಷಯ್‍ ಪಾತ್ರವನ್ನು ಮುಂದುವರೆಸಲಿದ್ದಾರೆ.

ಇದು ‘ಮ್ಯಾಕ್ಸ್’ ಚಿತ್ರದ ಮುಂದುವರೆದ ಭಾಗವಲ್ಲ, ಅದರ ಹಿಂದಿನ ಭಾಗ. ಕನ್ನಡದಲ್ಲಿ ಇದೀಗ ಪ್ರೀಕ್ವೆಲ್‍ಗಳ ಟ್ರೆಂಡ್‍ ಶುರುವಾಗಿದ್ದು, ‘ಮ್ಯಾಕ್ಸ್ 2’ ಸಹ ಒಂದು ಪ್ರೀಕ್ವೆಲ್‍ ಆಗಿರುತ್ತದೆ ಎಂಬುದು ವಿಶೇಷ.

ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ 10 ದಿನಗಳ ಮೊದಲ ಹಂತದ ಚಿತ್ರೀಕರಣ ಮುಗಿದಿದೆಎರಡನೇ ಹಂತದ ಚಿತ್ರೀಕರಣ ಇನ್ನಷ್ಟೇ ಶುರುವಾಗಬೇಕಿದೆ. ನೈಸ್‍ ರಸ್ತೆಯ ಬಳಿ ಚಿತ್ರಕ್ಕೆಂದೇ ದೊಡ್ಡ ಸೆಟ್‍ ನಿರ್ಮಿಸಲಾಗುತ್ತಿದ್ದು, ಅಲ್ಲಿ ಮಹತ್ವದ ದೃಶ್ಯಗಳ ಚಿತ್ರೀಕರಣ ನಡೆಯಲಿದೆಯಂತೆ. ಅನೂಪ್‍ ಭಂಡಾರಿ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕೂ ಮೊದಲೇ ‘ಮ್ಯಾಕ್ಸ್ 2’ ಚಿತ್ರದ ಚಿತ್ರೀಕರಣ ಮುಗಿದು, ಮೊದಲು ಬಿಡುಗಡೆ ಆಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

1 hour ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

2 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

2 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago