Categories: ಮನರಂಜನೆ

ಮಹಾಕ್ಷಯ್‍ ಸಸ್ಪೆಂಡ್‍ ಆಗಿದ್ದು ಯಾಕೆ? ಉತ್ತರ ‘ಮ್ಯಾಕ್ಸ್ 2’ನಲ್ಲಿ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರ ನೆನಪಿರಬಹುದು. ಅದರಲ್ಲಿ ಅವರು ಮಹಾಕ್ಷಯ್‍ ಎಂಬ ಪೊಲೀಸ್‍ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾನತ್ತಿಗೊಳಗಾಗಿರುವ ಅವರು ಅದನ್ನು ಮುಗಿಸಿ ಬಂದಿರುತ್ತಾರೆ. ಇಷ್ಟಕ್ಕೂ ಚಿತ್ರದಲ್ಲಿ ಸುದೀಪ್‍ ಯಾಕೆ ಸಸ್ಪೆಂಡ್‍ ಆಗಿರುತ್ತಾರೆ?

ಆ ಕಥೆಯನ್ನು ಹೇಳುವುದಕ್ಕೆ ಇದೀಗ ‘ಮ್ಯಾಕ್ಸ್ 2’ ಚಿತ್ರ ತಯಾರಾಗುತ್ತಿದೆ. ಕಳೆದ ವರ್ಷ ಬಿಡುಗಡೆಯಾದ ‘ಮ್ಯಾಕ್ಸ್’, ಯಶಸ್ವಿಯಾದ ಹಿನ್ನೆಲೆಯಲ್ಲಿ, ಚಿತ್ರದ ಮುಂದುವರೆದ ಭಾಗ ಬರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಈಗ ಅದು ನಿಜವಾಗಿದೆ. ‘ಮ್ಯಾಕ್ಸ್ 2’ ಬರುವುದು ನಿಜವಾಗಿದ್ದು, ಸದ್ಯದಲ್ಲೇ ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

‘ಮ್ಯಾಕ್ಸ್ 2’ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಈ ಚಿತ್ರವನ್ನು ಮೊದಲ ಭಾಗ ನಿರ್ದೇಶಿಸಿದ್ದ ವಿಜಯ್‍ ಕಾರ್ತಿಕೇಯ ಅವರೇ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ. ಮೊದಲ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್. ಧಾನು ಮತ್ತು ಸುದೀಪ್‍ ಜೊತೆಯಾಗಿ ನಿರ್ಮಾಣ ಮಾಡಿದ್ದರು. ‘ಮ್ಯಾಕ್ಸ್ 2’ ಚಿತ್ರವನ್ನು ಯಾರು ನಿರ್ಮಾಣ ಮಾಡಲಿದ್ದಾರೆ ಎಂಬ ವಿಷಯ ಸದ್ಯದಲ್ಲೇ ಹೊರಬೀಳಲಿದೆ. ಈ ಚಿತ್ರದಲ್ಲಿ ಸುದೀಪ್‍ ತಮ್ಮ ಮಹಾಕ್ಷಯ್‍ ಪಾತ್ರವನ್ನು ಮುಂದುವರೆಸಲಿದ್ದಾರೆ.

ಇದು ‘ಮ್ಯಾಕ್ಸ್’ ಚಿತ್ರದ ಮುಂದುವರೆದ ಭಾಗವಲ್ಲ, ಅದರ ಹಿಂದಿನ ಭಾಗ. ಕನ್ನಡದಲ್ಲಿ ಇದೀಗ ಪ್ರೀಕ್ವೆಲ್‍ಗಳ ಟ್ರೆಂಡ್‍ ಶುರುವಾಗಿದ್ದು, ‘ಮ್ಯಾಕ್ಸ್ 2’ ಸಹ ಒಂದು ಪ್ರೀಕ್ವೆಲ್‍ ಆಗಿರುತ್ತದೆ ಎಂಬುದು ವಿಶೇಷ.

ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ 10 ದಿನಗಳ ಮೊದಲ ಹಂತದ ಚಿತ್ರೀಕರಣ ಮುಗಿದಿದೆಎರಡನೇ ಹಂತದ ಚಿತ್ರೀಕರಣ ಇನ್ನಷ್ಟೇ ಶುರುವಾಗಬೇಕಿದೆ. ನೈಸ್‍ ರಸ್ತೆಯ ಬಳಿ ಚಿತ್ರಕ್ಕೆಂದೇ ದೊಡ್ಡ ಸೆಟ್‍ ನಿರ್ಮಿಸಲಾಗುತ್ತಿದ್ದು, ಅಲ್ಲಿ ಮಹತ್ವದ ದೃಶ್ಯಗಳ ಚಿತ್ರೀಕರಣ ನಡೆಯಲಿದೆಯಂತೆ. ಅನೂಪ್‍ ಭಂಡಾರಿ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕೂ ಮೊದಲೇ ‘ಮ್ಯಾಕ್ಸ್ 2’ ಚಿತ್ರದ ಚಿತ್ರೀಕರಣ ಮುಗಿದು, ಮೊದಲು ಬಿಡುಗಡೆ ಆಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

2 hours ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

4 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

9 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

9 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

9 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

10 hours ago