ಮನರಂಜನೆ

ಅಪ್ಪನ ಸ್ನೇಹಿತನಿಗೆ ನಾಯಕಿಯಾಗ್ತಾರಾ ಶ್ರುತಿ ಹಾಸನ್‍?

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್‍ ನಟ ಆಮೀರ್‍ ಖಾನ್‍ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇದಾದ ಮೇಲೆ ತೆಲುಗು ನಟ ನಾಗಾರ್ಜುನ ಹಾಗೂ ಮಲಯಾಳಂ ನಟ ಶೌಬಿನ್‍ ಅವರ ಪಾತ್ರಗಳನ್ನು ಪರಿಚಯಿಸುವ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು.

ಇದೀಗ ಚಿತ್ರಕ್ಕೆ ಶ್ರುತಿ ಹಾಸನ್‍ ಸೇರ್ಪಡೆಯಾಗಿರುವ ಸುದ್ದಿ ಬಂದಿದೆ. ಈ ಚಿತ್ರದಲ್ಲಿ ಅವರು ಪ್ರೀತಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಇತ್ತೀಚೆಗೆ ಪೋಸ್ಟರ್‍ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅವರು ನಾಯಕಿಯಾಗಿ ನಟಿಸುತ್ತಾರಾ? ಎಂಬ ಗುಸುಗುಸು ಸಹ ಕೇಳಿಬರುತ್ತಿದೆ.

ಶ್ರುತಿ ಹಾಸನ್‍, ಕಮಲ್ ಹಾಸನ್‍ ಅವರ ಮಗಳು. ಕಮಲ್‍ ಹಾಸನ್‍ ಮತ್ತು ರಜನಿಕಾಂತ್‍ ಹಲವು ವರ್ಷಗಳ ಗೆಳೆಯರು. ಇಬ್ಬರೂ ಹೆಚ್ಚೂ ಕಡಿಮೆ ಒಟ್ಟಿಗೆ ಚಿತ್ರರಂಗಕ್ಕೆ ಬಂದಿದ್ದಷ್ಟೇ ಅಲ್ಲ, ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದವರು. ಈಗ ಅಪ್ಪನ ಸ್ನೇಹಿತನ ಜೊತೆಗೆ ಶ್ರುತಿ ನಾಯಕಿಯಾಗಿ ನಟಿಸುತ್ತಿದ್ದಾರಾ? ಎಂಬ ಪ್ರಶ್ನೆಯೊಂದು ಕೇಳಿ ಬರುತ್ತಿದೆ. ಆದರೆ, ಚಿತ್ರತಂಡದವರಾಗಲೀ, ಶ್ರುತಿ ಹಾಸನ್‍ ಆಗಲೀ, ಈ ಬಗ್ಗೆ ಯಾವ ಪ್ರತಿಕ್ರಿಯೆ ನೀಡಿಲ್ಲ.

ಹೀಗಾಗುತ್ತಿರುವುದು ಇದು ಮೊದಲೇನಲ್ಲ. ಇದಕ್ಕೂ ಮುನ್ನ, ಚಿರಂಜೀವಿ ಅಭಿನಯದ ‘ವಾಲ್ಟರ್‍ ವೀರಯ್ಯ’ ಚಿತ್ರದಲ್ಲಿ ಶ್ರುತಿ ಹಾಸನ್‍ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಚಿರಂಜೀವಿ ಸಹ ಕಮಲ್ ಹಾಸನ್‍ ಅವರ ಸ್ನೇಹಿತನೇ. ಇನ್ನು, ರಜನಿಕಾಂತ್‍ ಅಭಿನಯದ ‘ಲಿಂಗ’ ಚಿತ್ರದಲ್ಲಿ ಸೋನಾಕ್ಷಿ ಸಿನ್ಹಾ ನಾಯಕಿಯಾಗಿದ್ದರು. ವಿಶೇಷವೆಂದರೆ, ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ ಮತ್ತು ರಜನಿಕಾಂತ್‍ ಹಲವು ವರ್ಷಗಳ ಗೆಳೆಯರು.

ಅಂದಹಾಗೆ, ‘ಕೂಲಿ’ ಚಿತ್ರದಲ್ಲಿ ಶ್ರುತಿ, ಪ್ರೀತಿ ಎಂಬ ಯುವತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಮೊದಲ ನೋಟ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಪೋಸ್ರ್ ಹಂಚಿಕೊಳ್ಳುವ ಮೂಲಕ ನಿರ್ದೇಶಕ ಲೋಕೇಶ್‍ ಕನಕರಾಜ್‍, ಶ್ರುತಿ ಹಾಸನ್‍ ಅವರನ್ನು ಚಿತ್ರತಂಡಕ್ಕೆ ಬರಮಾಡಿಕೊಂಡಿದ್ದಾರೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಶ್ರುತಿ ಹಾಸನ್, ಉಪೇಂದ್ರ, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದು, ಲೋಕೇಶ್‍ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ.

ಭೂಮಿಕಾ

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

9 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

10 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

10 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

10 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

10 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

10 hours ago