ಮನರಂಜನೆ

ಅಪ್ಪನ ಸ್ನೇಹಿತನಿಗೆ ನಾಯಕಿಯಾಗ್ತಾರಾ ಶ್ರುತಿ ಹಾಸನ್‍?

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್‍ ನಟ ಆಮೀರ್‍ ಖಾನ್‍ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇದಾದ ಮೇಲೆ ತೆಲುಗು ನಟ ನಾಗಾರ್ಜುನ ಹಾಗೂ ಮಲಯಾಳಂ ನಟ ಶೌಬಿನ್‍ ಅವರ ಪಾತ್ರಗಳನ್ನು ಪರಿಚಯಿಸುವ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು.

ಇದೀಗ ಚಿತ್ರಕ್ಕೆ ಶ್ರುತಿ ಹಾಸನ್‍ ಸೇರ್ಪಡೆಯಾಗಿರುವ ಸುದ್ದಿ ಬಂದಿದೆ. ಈ ಚಿತ್ರದಲ್ಲಿ ಅವರು ಪ್ರೀತಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಇತ್ತೀಚೆಗೆ ಪೋಸ್ಟರ್‍ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅವರು ನಾಯಕಿಯಾಗಿ ನಟಿಸುತ್ತಾರಾ? ಎಂಬ ಗುಸುಗುಸು ಸಹ ಕೇಳಿಬರುತ್ತಿದೆ.

ಶ್ರುತಿ ಹಾಸನ್‍, ಕಮಲ್ ಹಾಸನ್‍ ಅವರ ಮಗಳು. ಕಮಲ್‍ ಹಾಸನ್‍ ಮತ್ತು ರಜನಿಕಾಂತ್‍ ಹಲವು ವರ್ಷಗಳ ಗೆಳೆಯರು. ಇಬ್ಬರೂ ಹೆಚ್ಚೂ ಕಡಿಮೆ ಒಟ್ಟಿಗೆ ಚಿತ್ರರಂಗಕ್ಕೆ ಬಂದಿದ್ದಷ್ಟೇ ಅಲ್ಲ, ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದವರು. ಈಗ ಅಪ್ಪನ ಸ್ನೇಹಿತನ ಜೊತೆಗೆ ಶ್ರುತಿ ನಾಯಕಿಯಾಗಿ ನಟಿಸುತ್ತಿದ್ದಾರಾ? ಎಂಬ ಪ್ರಶ್ನೆಯೊಂದು ಕೇಳಿ ಬರುತ್ತಿದೆ. ಆದರೆ, ಚಿತ್ರತಂಡದವರಾಗಲೀ, ಶ್ರುತಿ ಹಾಸನ್‍ ಆಗಲೀ, ಈ ಬಗ್ಗೆ ಯಾವ ಪ್ರತಿಕ್ರಿಯೆ ನೀಡಿಲ್ಲ.

ಹೀಗಾಗುತ್ತಿರುವುದು ಇದು ಮೊದಲೇನಲ್ಲ. ಇದಕ್ಕೂ ಮುನ್ನ, ಚಿರಂಜೀವಿ ಅಭಿನಯದ ‘ವಾಲ್ಟರ್‍ ವೀರಯ್ಯ’ ಚಿತ್ರದಲ್ಲಿ ಶ್ರುತಿ ಹಾಸನ್‍ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಚಿರಂಜೀವಿ ಸಹ ಕಮಲ್ ಹಾಸನ್‍ ಅವರ ಸ್ನೇಹಿತನೇ. ಇನ್ನು, ರಜನಿಕಾಂತ್‍ ಅಭಿನಯದ ‘ಲಿಂಗ’ ಚಿತ್ರದಲ್ಲಿ ಸೋನಾಕ್ಷಿ ಸಿನ್ಹಾ ನಾಯಕಿಯಾಗಿದ್ದರು. ವಿಶೇಷವೆಂದರೆ, ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ ಮತ್ತು ರಜನಿಕಾಂತ್‍ ಹಲವು ವರ್ಷಗಳ ಗೆಳೆಯರು.

ಅಂದಹಾಗೆ, ‘ಕೂಲಿ’ ಚಿತ್ರದಲ್ಲಿ ಶ್ರುತಿ, ಪ್ರೀತಿ ಎಂಬ ಯುವತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಮೊದಲ ನೋಟ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಪೋಸ್ರ್ ಹಂಚಿಕೊಳ್ಳುವ ಮೂಲಕ ನಿರ್ದೇಶಕ ಲೋಕೇಶ್‍ ಕನಕರಾಜ್‍, ಶ್ರುತಿ ಹಾಸನ್‍ ಅವರನ್ನು ಚಿತ್ರತಂಡಕ್ಕೆ ಬರಮಾಡಿಕೊಂಡಿದ್ದಾರೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಶ್ರುತಿ ಹಾಸನ್, ಉಪೇಂದ್ರ, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದು, ಲೋಕೇಶ್‍ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ.

ಭೂಮಿಕಾ

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

6 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

6 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

7 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

7 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

7 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

7 hours ago