ಮನರಂಜನೆ

ಅಪ್ಪನ ಸ್ನೇಹಿತನಿಗೆ ನಾಯಕಿಯಾಗ್ತಾರಾ ಶ್ರುತಿ ಹಾಸನ್‍?

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್‍ ನಟ ಆಮೀರ್‍ ಖಾನ್‍ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇದಾದ ಮೇಲೆ ತೆಲುಗು ನಟ ನಾಗಾರ್ಜುನ ಹಾಗೂ ಮಲಯಾಳಂ ನಟ ಶೌಬಿನ್‍ ಅವರ ಪಾತ್ರಗಳನ್ನು ಪರಿಚಯಿಸುವ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು.

ಇದೀಗ ಚಿತ್ರಕ್ಕೆ ಶ್ರುತಿ ಹಾಸನ್‍ ಸೇರ್ಪಡೆಯಾಗಿರುವ ಸುದ್ದಿ ಬಂದಿದೆ. ಈ ಚಿತ್ರದಲ್ಲಿ ಅವರು ಪ್ರೀತಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಇತ್ತೀಚೆಗೆ ಪೋಸ್ಟರ್‍ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅವರು ನಾಯಕಿಯಾಗಿ ನಟಿಸುತ್ತಾರಾ? ಎಂಬ ಗುಸುಗುಸು ಸಹ ಕೇಳಿಬರುತ್ತಿದೆ.

ಶ್ರುತಿ ಹಾಸನ್‍, ಕಮಲ್ ಹಾಸನ್‍ ಅವರ ಮಗಳು. ಕಮಲ್‍ ಹಾಸನ್‍ ಮತ್ತು ರಜನಿಕಾಂತ್‍ ಹಲವು ವರ್ಷಗಳ ಗೆಳೆಯರು. ಇಬ್ಬರೂ ಹೆಚ್ಚೂ ಕಡಿಮೆ ಒಟ್ಟಿಗೆ ಚಿತ್ರರಂಗಕ್ಕೆ ಬಂದಿದ್ದಷ್ಟೇ ಅಲ್ಲ, ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದವರು. ಈಗ ಅಪ್ಪನ ಸ್ನೇಹಿತನ ಜೊತೆಗೆ ಶ್ರುತಿ ನಾಯಕಿಯಾಗಿ ನಟಿಸುತ್ತಿದ್ದಾರಾ? ಎಂಬ ಪ್ರಶ್ನೆಯೊಂದು ಕೇಳಿ ಬರುತ್ತಿದೆ. ಆದರೆ, ಚಿತ್ರತಂಡದವರಾಗಲೀ, ಶ್ರುತಿ ಹಾಸನ್‍ ಆಗಲೀ, ಈ ಬಗ್ಗೆ ಯಾವ ಪ್ರತಿಕ್ರಿಯೆ ನೀಡಿಲ್ಲ.

ಹೀಗಾಗುತ್ತಿರುವುದು ಇದು ಮೊದಲೇನಲ್ಲ. ಇದಕ್ಕೂ ಮುನ್ನ, ಚಿರಂಜೀವಿ ಅಭಿನಯದ ‘ವಾಲ್ಟರ್‍ ವೀರಯ್ಯ’ ಚಿತ್ರದಲ್ಲಿ ಶ್ರುತಿ ಹಾಸನ್‍ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಚಿರಂಜೀವಿ ಸಹ ಕಮಲ್ ಹಾಸನ್‍ ಅವರ ಸ್ನೇಹಿತನೇ. ಇನ್ನು, ರಜನಿಕಾಂತ್‍ ಅಭಿನಯದ ‘ಲಿಂಗ’ ಚಿತ್ರದಲ್ಲಿ ಸೋನಾಕ್ಷಿ ಸಿನ್ಹಾ ನಾಯಕಿಯಾಗಿದ್ದರು. ವಿಶೇಷವೆಂದರೆ, ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ ಮತ್ತು ರಜನಿಕಾಂತ್‍ ಹಲವು ವರ್ಷಗಳ ಗೆಳೆಯರು.

ಅಂದಹಾಗೆ, ‘ಕೂಲಿ’ ಚಿತ್ರದಲ್ಲಿ ಶ್ರುತಿ, ಪ್ರೀತಿ ಎಂಬ ಯುವತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಮೊದಲ ನೋಟ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಪೋಸ್ರ್ ಹಂಚಿಕೊಳ್ಳುವ ಮೂಲಕ ನಿರ್ದೇಶಕ ಲೋಕೇಶ್‍ ಕನಕರಾಜ್‍, ಶ್ರುತಿ ಹಾಸನ್‍ ಅವರನ್ನು ಚಿತ್ರತಂಡಕ್ಕೆ ಬರಮಾಡಿಕೊಂಡಿದ್ದಾರೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಶ್ರುತಿ ಹಾಸನ್, ಉಪೇಂದ್ರ, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದು, ಲೋಕೇಶ್‍ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ.

ಭೂಮಿಕಾ

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

8 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

9 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

10 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

10 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

11 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

13 hours ago