ಮನರಂಜನೆ

ನಿರ್ದೇಶನ, ನಿರ್ಮಾಣದ ನಂತರ ನಟನೆಯತ್ತ ಸತ್ಯ

‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್‍, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ತಮ್ಮ ಸತ್ಯ ಪಿಕ್ಚರ್ಸ್‍ ಸಂಸ್ಥೆಯಡಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ರಾಜ್ಯಾದ್ಯಂತ ತಾವೇ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ‘Go Win The Swamy’ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಚಿತ್ರದ ಬಗ್ಗೆ ಸತ್ಯಪ್ರಕಾಶ್ ಇದೇ ಮೊದಲ ಬಾರಿಗೆ ಹಲವು ವಿಷಯಗಳನ್ನು ಹಂಚಿಕೊಂಡರು.

‘X&Y’ ಚಿತ್ರದ ಕುರಿತು ಮಾತನಾಡುವ ಸತ್ಯಪ್ರಕಾಶ್‍, ‘ನಮ್ಮ ಬಳಿ ಒಂದೊಳ್ಳೆಯ ಕಥೆ ಇತ್ತು. ಆದರೆ, ಅದನ್ನು ತೆರೆಯ ಮೇಲೆ ತರುವುದು ಸುಲಭವಾಗಿರಲಿಲ್ಲ. ವಿಷಯವನ್ನು ಮನರಂಜನಾತ್ಮಕವಾಗಿ ಹೇಳುವುದರ ಜೊತೆಗೆ ಸರಳವಾಗಿ ಮತ್ತು ಎಲ್ಲಾ ವರ್ಗದ ಜನರಿಗೆ ಹೇಳಬೇಕಿತ್ತು. ಇದು ಸೈನ್ಸ್ ಫಿಕ್ಷನ್‍ ಕಥೆಯಲ್ಲ. ಇದೊಂದು ಭವನಾತ್ಮಕ ಕಥೆ. ಅದನ್ನು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ನಾನು ಈ ಚಿತ್ರದ ಹೀರೋ ಅಲ್ಲ. ಒಬ್ಬ ನಟ ಅಷ್ಟೇ. ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಹೂವಿನ ಜೊತೆಗೆ ನಾರು ಸ್ವರ್ಗ ಸೇರುವಂತೆ ನಾನ ನಟಿಸಿದ್ದೇನೆ. ನನ್ನಿಂದ ಒಳ್ಳೆಯ ನಟನೆ ಬಂದಿದ್ದರೆ, ಅದಕ್ಕೆ ಅವರೆಲ್ಲರೂ ಕಾರಣ’ ಎಂದರು.

ಒಂದೊಳ್ಳೆಯ ತಂಡವಿದ್ದರೆ ನಿರ್ಮಾಪಕರೂ ಆಗಬಹುದು, ನಿರ್ದೇಶಕರೂ ಆಗಬಹುದು ಎನ್ನುವ ಸತ್ಯಪ್ರಕಾಶ್‍, ‘ಇಲ್ಲಿ ತಂಡ ಮುಖ್ಯ. ತಂಡ ಚೆನ್ನಾಗಿ ಇದ್ದರೆ ನಾವು ಏನು ಬೇಕಾದರೂ ಮಾಡಬಹುದು. ಈ ಚಿತ್ರವನ್ನು ನನ್ನದೇ ಸತ್ಯ ಪಿಕ್ಚರ್ಸ್ ಸಂಸ್ಥೆ ನಿರ್ಮಿಸಿದೆಯಾದರೂ, ನನ್ನ ಬಳಿ ದುಡ್ಡಿಲ್ಲ. ನಿರ್ಮಾಪಕರಾಗಿ ಬಹಳಷ್ಟು ಜನ ಇದ್ದಾರೆ. ಇದೊಂದು ಹೊಸ ತರಹದ ಚಿತ್ರ. ಜನ ಬಂದು ಚಿತ್ರ ನೋಡುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ಬೃಂದಾ ಆಚಾರ್ಯ ಇಲ್ಲಿ ಕೃಪಾ ಎಂಬ ಯುವತಿಯ ಪಾತ್ರ ಮಾಡಿದ್ದಾರೆ. ‘ಕಥೆ ಕೇಳಿದಾಗ ಬಹಳ ಸವಾಲಿನದ್ದು ಎಂದನಿಸಿತು. ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

‘X&Y’ ಚಿತ್ರದಲ್ಲಿ ಸತ್ಯಪ್ರಕಾಶ್‍ ಮತ್ತು ಬೃಂದಾ ಆಚಾರ್ಯ ಜೊತೆಗೆ ಧರ್ಮಣ್ಣ, ಸುಂದರ್ ವೀಣಾ, ಅಥರ್ವ ಪ್ರಕಾಶ್, ಹರಿಣಿ, ಆಯನಾ, ವೀಣಾ ಸುಂದರ್‍, ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಹರ್ಷ ಕೌಶಿಕ್ ಸಂಗೀತ ಮತ್ತು ಬಿ.ಎಸ್. ಕೆಂಪರಾಜ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

8 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

11 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

12 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

13 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

13 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

14 hours ago