ಮನರಂಜನೆ

ನಿರ್ದೇಶನ, ನಿರ್ಮಾಣದ ನಂತರ ನಟನೆಯತ್ತ ಸತ್ಯ

‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್‍, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ತಮ್ಮ ಸತ್ಯ ಪಿಕ್ಚರ್ಸ್‍ ಸಂಸ್ಥೆಯಡಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ರಾಜ್ಯಾದ್ಯಂತ ತಾವೇ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ‘Go Win The Swamy’ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಚಿತ್ರದ ಬಗ್ಗೆ ಸತ್ಯಪ್ರಕಾಶ್ ಇದೇ ಮೊದಲ ಬಾರಿಗೆ ಹಲವು ವಿಷಯಗಳನ್ನು ಹಂಚಿಕೊಂಡರು.

‘X&Y’ ಚಿತ್ರದ ಕುರಿತು ಮಾತನಾಡುವ ಸತ್ಯಪ್ರಕಾಶ್‍, ‘ನಮ್ಮ ಬಳಿ ಒಂದೊಳ್ಳೆಯ ಕಥೆ ಇತ್ತು. ಆದರೆ, ಅದನ್ನು ತೆರೆಯ ಮೇಲೆ ತರುವುದು ಸುಲಭವಾಗಿರಲಿಲ್ಲ. ವಿಷಯವನ್ನು ಮನರಂಜನಾತ್ಮಕವಾಗಿ ಹೇಳುವುದರ ಜೊತೆಗೆ ಸರಳವಾಗಿ ಮತ್ತು ಎಲ್ಲಾ ವರ್ಗದ ಜನರಿಗೆ ಹೇಳಬೇಕಿತ್ತು. ಇದು ಸೈನ್ಸ್ ಫಿಕ್ಷನ್‍ ಕಥೆಯಲ್ಲ. ಇದೊಂದು ಭವನಾತ್ಮಕ ಕಥೆ. ಅದನ್ನು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ನಾನು ಈ ಚಿತ್ರದ ಹೀರೋ ಅಲ್ಲ. ಒಬ್ಬ ನಟ ಅಷ್ಟೇ. ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಹೂವಿನ ಜೊತೆಗೆ ನಾರು ಸ್ವರ್ಗ ಸೇರುವಂತೆ ನಾನ ನಟಿಸಿದ್ದೇನೆ. ನನ್ನಿಂದ ಒಳ್ಳೆಯ ನಟನೆ ಬಂದಿದ್ದರೆ, ಅದಕ್ಕೆ ಅವರೆಲ್ಲರೂ ಕಾರಣ’ ಎಂದರು.

ಒಂದೊಳ್ಳೆಯ ತಂಡವಿದ್ದರೆ ನಿರ್ಮಾಪಕರೂ ಆಗಬಹುದು, ನಿರ್ದೇಶಕರೂ ಆಗಬಹುದು ಎನ್ನುವ ಸತ್ಯಪ್ರಕಾಶ್‍, ‘ಇಲ್ಲಿ ತಂಡ ಮುಖ್ಯ. ತಂಡ ಚೆನ್ನಾಗಿ ಇದ್ದರೆ ನಾವು ಏನು ಬೇಕಾದರೂ ಮಾಡಬಹುದು. ಈ ಚಿತ್ರವನ್ನು ನನ್ನದೇ ಸತ್ಯ ಪಿಕ್ಚರ್ಸ್ ಸಂಸ್ಥೆ ನಿರ್ಮಿಸಿದೆಯಾದರೂ, ನನ್ನ ಬಳಿ ದುಡ್ಡಿಲ್ಲ. ನಿರ್ಮಾಪಕರಾಗಿ ಬಹಳಷ್ಟು ಜನ ಇದ್ದಾರೆ. ಇದೊಂದು ಹೊಸ ತರಹದ ಚಿತ್ರ. ಜನ ಬಂದು ಚಿತ್ರ ನೋಡುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ಬೃಂದಾ ಆಚಾರ್ಯ ಇಲ್ಲಿ ಕೃಪಾ ಎಂಬ ಯುವತಿಯ ಪಾತ್ರ ಮಾಡಿದ್ದಾರೆ. ‘ಕಥೆ ಕೇಳಿದಾಗ ಬಹಳ ಸವಾಲಿನದ್ದು ಎಂದನಿಸಿತು. ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

‘X&Y’ ಚಿತ್ರದಲ್ಲಿ ಸತ್ಯಪ್ರಕಾಶ್‍ ಮತ್ತು ಬೃಂದಾ ಆಚಾರ್ಯ ಜೊತೆಗೆ ಧರ್ಮಣ್ಣ, ಸುಂದರ್ ವೀಣಾ, ಅಥರ್ವ ಪ್ರಕಾಶ್, ಹರಿಣಿ, ಆಯನಾ, ವೀಣಾ ಸುಂದರ್‍, ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಹರ್ಷ ಕೌಶಿಕ್ ಸಂಗೀತ ಮತ್ತು ಬಿ.ಎಸ್. ಕೆಂಪರಾಜ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago