ಮನರಂಜನೆ

ನಿರ್ದೇಶನ, ನಿರ್ಮಾಣದ ನಂತರ ನಟನೆಯತ್ತ ಸತ್ಯ

‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್‍, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ತಮ್ಮ ಸತ್ಯ ಪಿಕ್ಚರ್ಸ್‍ ಸಂಸ್ಥೆಯಡಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ರಾಜ್ಯಾದ್ಯಂತ ತಾವೇ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ‘Go Win The Swamy’ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಚಿತ್ರದ ಬಗ್ಗೆ ಸತ್ಯಪ್ರಕಾಶ್ ಇದೇ ಮೊದಲ ಬಾರಿಗೆ ಹಲವು ವಿಷಯಗಳನ್ನು ಹಂಚಿಕೊಂಡರು.

‘X&Y’ ಚಿತ್ರದ ಕುರಿತು ಮಾತನಾಡುವ ಸತ್ಯಪ್ರಕಾಶ್‍, ‘ನಮ್ಮ ಬಳಿ ಒಂದೊಳ್ಳೆಯ ಕಥೆ ಇತ್ತು. ಆದರೆ, ಅದನ್ನು ತೆರೆಯ ಮೇಲೆ ತರುವುದು ಸುಲಭವಾಗಿರಲಿಲ್ಲ. ವಿಷಯವನ್ನು ಮನರಂಜನಾತ್ಮಕವಾಗಿ ಹೇಳುವುದರ ಜೊತೆಗೆ ಸರಳವಾಗಿ ಮತ್ತು ಎಲ್ಲಾ ವರ್ಗದ ಜನರಿಗೆ ಹೇಳಬೇಕಿತ್ತು. ಇದು ಸೈನ್ಸ್ ಫಿಕ್ಷನ್‍ ಕಥೆಯಲ್ಲ. ಇದೊಂದು ಭವನಾತ್ಮಕ ಕಥೆ. ಅದನ್ನು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ನಾನು ಈ ಚಿತ್ರದ ಹೀರೋ ಅಲ್ಲ. ಒಬ್ಬ ನಟ ಅಷ್ಟೇ. ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಹೂವಿನ ಜೊತೆಗೆ ನಾರು ಸ್ವರ್ಗ ಸೇರುವಂತೆ ನಾನ ನಟಿಸಿದ್ದೇನೆ. ನನ್ನಿಂದ ಒಳ್ಳೆಯ ನಟನೆ ಬಂದಿದ್ದರೆ, ಅದಕ್ಕೆ ಅವರೆಲ್ಲರೂ ಕಾರಣ’ ಎಂದರು.

ಒಂದೊಳ್ಳೆಯ ತಂಡವಿದ್ದರೆ ನಿರ್ಮಾಪಕರೂ ಆಗಬಹುದು, ನಿರ್ದೇಶಕರೂ ಆಗಬಹುದು ಎನ್ನುವ ಸತ್ಯಪ್ರಕಾಶ್‍, ‘ಇಲ್ಲಿ ತಂಡ ಮುಖ್ಯ. ತಂಡ ಚೆನ್ನಾಗಿ ಇದ್ದರೆ ನಾವು ಏನು ಬೇಕಾದರೂ ಮಾಡಬಹುದು. ಈ ಚಿತ್ರವನ್ನು ನನ್ನದೇ ಸತ್ಯ ಪಿಕ್ಚರ್ಸ್ ಸಂಸ್ಥೆ ನಿರ್ಮಿಸಿದೆಯಾದರೂ, ನನ್ನ ಬಳಿ ದುಡ್ಡಿಲ್ಲ. ನಿರ್ಮಾಪಕರಾಗಿ ಬಹಳಷ್ಟು ಜನ ಇದ್ದಾರೆ. ಇದೊಂದು ಹೊಸ ತರಹದ ಚಿತ್ರ. ಜನ ಬಂದು ಚಿತ್ರ ನೋಡುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ಬೃಂದಾ ಆಚಾರ್ಯ ಇಲ್ಲಿ ಕೃಪಾ ಎಂಬ ಯುವತಿಯ ಪಾತ್ರ ಮಾಡಿದ್ದಾರೆ. ‘ಕಥೆ ಕೇಳಿದಾಗ ಬಹಳ ಸವಾಲಿನದ್ದು ಎಂದನಿಸಿತು. ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

‘X&Y’ ಚಿತ್ರದಲ್ಲಿ ಸತ್ಯಪ್ರಕಾಶ್‍ ಮತ್ತು ಬೃಂದಾ ಆಚಾರ್ಯ ಜೊತೆಗೆ ಧರ್ಮಣ್ಣ, ಸುಂದರ್ ವೀಣಾ, ಅಥರ್ವ ಪ್ರಕಾಶ್, ಹರಿಣಿ, ಆಯನಾ, ವೀಣಾ ಸುಂದರ್‍, ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಹರ್ಷ ಕೌಶಿಕ್ ಸಂಗೀತ ಮತ್ತು ಬಿ.ಎಸ್. ಕೆಂಪರಾಜ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

4 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

8 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

9 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

9 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

9 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

10 hours ago