ಮನರಂಜನೆ

ಆಟೋದಲ್ಲೊಂದು ಆಂಬುಲೆನ್ಸ್; ಜೂನ್‍.26ರಂದು ಬಿಡುಗಡೆ ಆಗಲಿದೆ ‘X&Y’

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ನಿರ್ದೇಶಿಸುವುದರ ಜೊತೆಗೆ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘X&Y’ ಚಿತ್ರವು ಬಿಡುಗಡೆ ಸಜ್ಜಾಗಿದೆ. ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಚಿತ್ರವು ಜೂನ್‍.26ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ ಹೊಸ ಆಟೋ ಪರಿಚಯಿಸಲಾಗಿದೆ. ಈ ಆಟೋದ ವಿಶೇಷತೆ ಎಂದರೆ, ಆಂಬುಲೆನ್ಸ್ ನಲ್ಲಿರುವಂತೆ ಎಲ್ಲ ಸೌಲಭ್ಯಗಳಿವೆ. ಈ ಆಟೋಗೆ ಆಟೋ ಚಾಲಕರ ಬೆಂಬಲ ಸಿಕ್ಕಿದ್ದು, ಆಟೋ ಚಾಲಕ ‘ಟಗರು’ ಶಿವ ಅವರ ಸಾರಥ್ಯದಲ್ಲಿ ಅನೇಕ ಆಟೋ ಚಾಲಕರು ರೀಲ್ಸ್ ಮಾಡುವ ಮೂಲಕ ಇದರ ಉಪಯೋಗವನ್ನು ಜನರಿಗೆ ತಿಳಿಸುತ್ತಿದ್ದಾರೆ. ಆಟೋ ಚಾಲಕರ ಪ್ರೋತ್ಸಾಹಕ್ಕೆ ಚಿತ್ರತಂಡ ಸಹ ಧನ್ಯವಾದ ತಿಳಿಸಿದೆ.

‘X&Y’ ಚಿತ್ರದಲ್ಲಿ ಸತ್ಯ ಪ್ರಕಾಶ್‍, ಆಟೋ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆಟೋವನ್ನು ಚಿತ್ರದಲ್ಲಿ ಒಬ್ಬ ಕಲಾವಿದನಂತೆ ಕಲಾತ್ಮಕವಾಗಿ ಬಳಸಲಾಗಿದೆ. ಚಿತ್ರದ ಹಲವು ಸನ್ನಿವೇಶಗಳಲ್ಲಿ ಈ ‘ಆಂಬು ಆಟೋ’ ಪ್ರಮುಖ ಪಾತ್ರವಹಿಸುತ್ತದೆಯಂತೆ.

‘X&Y’, ಸತ್ಯ ಪ್ರಕಾಶ್‍ ನಿರ್ದೇಶನದ ನಾಲ್ಕನೇ ಚಿತ್ರ. ಈ ಚಿತ್ರವನ್ನು ನಿರ್ದೇಶಿಸಿರುವುದಷ್ಟೇ ಅಲ್ಲ, ಚಿತ್ರವನ್ನು ತಾವೇ ತಮ್ಮ ಸತ್ಯ ಪಿಕ್ಚರ್ಸ್‍ ಬ್ಯಾನರ್ ಅಡಿ ನಿರ್ಮಾಣ ಮಾಡಿ, ಅದರಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸತ್ಯಪ್ರಕಾಶ್‍ ಜೊತೆಗೆ ಅಥರ್ವ ಪ್ರಕಾಶ್, ಬೃಂದಾ ಆಚಾರ್ಯ, ಸುಂದರ್ ವೀಣಾ, ದೊಡ್ಡಣ್ಣ ಮುಂತಾದವರು ನಟಿಸಿದ್ದು, ವಾಸುಕಿ ವೈಭವ್ ಸಂಗೀತ ಮತ್ತು ಲವಿತ್‍ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘X&Y’ ಚಿತ್ರದ ಮೂಲಕ ತಂದೆ-ತಾಯಿ ಆಗಲು ಹೊರಟಿರುವ ಇವತ್ತಿನ ತಲೆಮಾರಿನವರ ಕಥೆ ಹೇಳುವುದಕ್ಕೆ ಹೊರಟಿದ್ದಾರೆ ಸತ್ಯಪ್ರಕಾಶ್‍. ತಮ್ಮ ಹಿಂದಿನ ಚಿತ್ರಗಳಂತೆ ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

18 mins ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

54 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

2 hours ago