ಮನರಂಜನೆ

ಆಟೋದಲ್ಲೊಂದು ಆಂಬುಲೆನ್ಸ್; ಜೂನ್‍.26ರಂದು ಬಿಡುಗಡೆ ಆಗಲಿದೆ ‘X&Y’

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ನಿರ್ದೇಶಿಸುವುದರ ಜೊತೆಗೆ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘X&Y’ ಚಿತ್ರವು ಬಿಡುಗಡೆ ಸಜ್ಜಾಗಿದೆ. ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಚಿತ್ರವು ಜೂನ್‍.26ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ ಹೊಸ ಆಟೋ ಪರಿಚಯಿಸಲಾಗಿದೆ. ಈ ಆಟೋದ ವಿಶೇಷತೆ ಎಂದರೆ, ಆಂಬುಲೆನ್ಸ್ ನಲ್ಲಿರುವಂತೆ ಎಲ್ಲ ಸೌಲಭ್ಯಗಳಿವೆ. ಈ ಆಟೋಗೆ ಆಟೋ ಚಾಲಕರ ಬೆಂಬಲ ಸಿಕ್ಕಿದ್ದು, ಆಟೋ ಚಾಲಕ ‘ಟಗರು’ ಶಿವ ಅವರ ಸಾರಥ್ಯದಲ್ಲಿ ಅನೇಕ ಆಟೋ ಚಾಲಕರು ರೀಲ್ಸ್ ಮಾಡುವ ಮೂಲಕ ಇದರ ಉಪಯೋಗವನ್ನು ಜನರಿಗೆ ತಿಳಿಸುತ್ತಿದ್ದಾರೆ. ಆಟೋ ಚಾಲಕರ ಪ್ರೋತ್ಸಾಹಕ್ಕೆ ಚಿತ್ರತಂಡ ಸಹ ಧನ್ಯವಾದ ತಿಳಿಸಿದೆ.

‘X&Y’ ಚಿತ್ರದಲ್ಲಿ ಸತ್ಯ ಪ್ರಕಾಶ್‍, ಆಟೋ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆಟೋವನ್ನು ಚಿತ್ರದಲ್ಲಿ ಒಬ್ಬ ಕಲಾವಿದನಂತೆ ಕಲಾತ್ಮಕವಾಗಿ ಬಳಸಲಾಗಿದೆ. ಚಿತ್ರದ ಹಲವು ಸನ್ನಿವೇಶಗಳಲ್ಲಿ ಈ ‘ಆಂಬು ಆಟೋ’ ಪ್ರಮುಖ ಪಾತ್ರವಹಿಸುತ್ತದೆಯಂತೆ.

‘X&Y’, ಸತ್ಯ ಪ್ರಕಾಶ್‍ ನಿರ್ದೇಶನದ ನಾಲ್ಕನೇ ಚಿತ್ರ. ಈ ಚಿತ್ರವನ್ನು ನಿರ್ದೇಶಿಸಿರುವುದಷ್ಟೇ ಅಲ್ಲ, ಚಿತ್ರವನ್ನು ತಾವೇ ತಮ್ಮ ಸತ್ಯ ಪಿಕ್ಚರ್ಸ್‍ ಬ್ಯಾನರ್ ಅಡಿ ನಿರ್ಮಾಣ ಮಾಡಿ, ಅದರಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸತ್ಯಪ್ರಕಾಶ್‍ ಜೊತೆಗೆ ಅಥರ್ವ ಪ್ರಕಾಶ್, ಬೃಂದಾ ಆಚಾರ್ಯ, ಸುಂದರ್ ವೀಣಾ, ದೊಡ್ಡಣ್ಣ ಮುಂತಾದವರು ನಟಿಸಿದ್ದು, ವಾಸುಕಿ ವೈಭವ್ ಸಂಗೀತ ಮತ್ತು ಲವಿತ್‍ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘X&Y’ ಚಿತ್ರದ ಮೂಲಕ ತಂದೆ-ತಾಯಿ ಆಗಲು ಹೊರಟಿರುವ ಇವತ್ತಿನ ತಲೆಮಾರಿನವರ ಕಥೆ ಹೇಳುವುದಕ್ಕೆ ಹೊರಟಿದ್ದಾರೆ ಸತ್ಯಪ್ರಕಾಶ್‍. ತಮ್ಮ ಹಿಂದಿನ ಚಿತ್ರಗಳಂತೆ ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

4 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

4 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

4 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

6 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

6 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

6 hours ago