ಮನರಂಜನೆ

ಆಟೋದಲ್ಲೊಂದು ಆಂಬುಲೆನ್ಸ್; ಜೂನ್‍.26ರಂದು ಬಿಡುಗಡೆ ಆಗಲಿದೆ ‘X&Y’

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ನಿರ್ದೇಶಿಸುವುದರ ಜೊತೆಗೆ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘X&Y’ ಚಿತ್ರವು ಬಿಡುಗಡೆ ಸಜ್ಜಾಗಿದೆ. ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಚಿತ್ರವು ಜೂನ್‍.26ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ ಹೊಸ ಆಟೋ ಪರಿಚಯಿಸಲಾಗಿದೆ. ಈ ಆಟೋದ ವಿಶೇಷತೆ ಎಂದರೆ, ಆಂಬುಲೆನ್ಸ್ ನಲ್ಲಿರುವಂತೆ ಎಲ್ಲ ಸೌಲಭ್ಯಗಳಿವೆ. ಈ ಆಟೋಗೆ ಆಟೋ ಚಾಲಕರ ಬೆಂಬಲ ಸಿಕ್ಕಿದ್ದು, ಆಟೋ ಚಾಲಕ ‘ಟಗರು’ ಶಿವ ಅವರ ಸಾರಥ್ಯದಲ್ಲಿ ಅನೇಕ ಆಟೋ ಚಾಲಕರು ರೀಲ್ಸ್ ಮಾಡುವ ಮೂಲಕ ಇದರ ಉಪಯೋಗವನ್ನು ಜನರಿಗೆ ತಿಳಿಸುತ್ತಿದ್ದಾರೆ. ಆಟೋ ಚಾಲಕರ ಪ್ರೋತ್ಸಾಹಕ್ಕೆ ಚಿತ್ರತಂಡ ಸಹ ಧನ್ಯವಾದ ತಿಳಿಸಿದೆ.

‘X&Y’ ಚಿತ್ರದಲ್ಲಿ ಸತ್ಯ ಪ್ರಕಾಶ್‍, ಆಟೋ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆಟೋವನ್ನು ಚಿತ್ರದಲ್ಲಿ ಒಬ್ಬ ಕಲಾವಿದನಂತೆ ಕಲಾತ್ಮಕವಾಗಿ ಬಳಸಲಾಗಿದೆ. ಚಿತ್ರದ ಹಲವು ಸನ್ನಿವೇಶಗಳಲ್ಲಿ ಈ ‘ಆಂಬು ಆಟೋ’ ಪ್ರಮುಖ ಪಾತ್ರವಹಿಸುತ್ತದೆಯಂತೆ.

‘X&Y’, ಸತ್ಯ ಪ್ರಕಾಶ್‍ ನಿರ್ದೇಶನದ ನಾಲ್ಕನೇ ಚಿತ್ರ. ಈ ಚಿತ್ರವನ್ನು ನಿರ್ದೇಶಿಸಿರುವುದಷ್ಟೇ ಅಲ್ಲ, ಚಿತ್ರವನ್ನು ತಾವೇ ತಮ್ಮ ಸತ್ಯ ಪಿಕ್ಚರ್ಸ್‍ ಬ್ಯಾನರ್ ಅಡಿ ನಿರ್ಮಾಣ ಮಾಡಿ, ಅದರಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸತ್ಯಪ್ರಕಾಶ್‍ ಜೊತೆಗೆ ಅಥರ್ವ ಪ್ರಕಾಶ್, ಬೃಂದಾ ಆಚಾರ್ಯ, ಸುಂದರ್ ವೀಣಾ, ದೊಡ್ಡಣ್ಣ ಮುಂತಾದವರು ನಟಿಸಿದ್ದು, ವಾಸುಕಿ ವೈಭವ್ ಸಂಗೀತ ಮತ್ತು ಲವಿತ್‍ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘X&Y’ ಚಿತ್ರದ ಮೂಲಕ ತಂದೆ-ತಾಯಿ ಆಗಲು ಹೊರಟಿರುವ ಇವತ್ತಿನ ತಲೆಮಾರಿನವರ ಕಥೆ ಹೇಳುವುದಕ್ಕೆ ಹೊರಟಿದ್ದಾರೆ ಸತ್ಯಪ್ರಕಾಶ್‍. ತಮ್ಮ ಹಿಂದಿನ ಚಿತ್ರಗಳಂತೆ ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

5 mins ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

51 mins ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

59 mins ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

1 hour ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

2 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

11 hours ago