ಮನರಂಜನೆ

25 ವರ್ಷಗಳ ನಂತರ ನ.7ರಂದು ‘ಯಜಮಾನ’ ಮರು ಬಿಡುಗಡೆ

25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್‍ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು ಬಿಡುಗಡೆ ಮಾಡಲಾಗುತ್ತಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ಈ ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಚಿತ್ರದ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರು ಸಮಾರಂಭದಲ್ಲಿ ಭಾಗಿಯಾಗಿದ್ದರು. ‘ಯಜಮಾನ’ ಚಿತ್ರದ ಕುರಿತು ನೆನಪಿನ ಬುತ್ತಿ ಬಿಚ್ಚಿಟ್ಟರು.

ಇದನ್ನೂ ಓದಿ:-ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ರೆಹಮಾನ್, ‘ಈ ಚಿತ್ರ ಆಗಲು ಪ್ರಮುಖ ಕಾರಣ ವಿಷ್ಣುವರ್ಧನ್ ಹಾಗೂ ಕೆ.ವಿ. ನಾಗೇಶ್ ಕುಮಾರ್. 130ಕ್ಕೂ ಹೆಚ್ಚು ಕಡೆ ಶತದಿನೋತ್ಸವ, 40ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 25 ವಾರ ಹಾಗೂ 4 ಕಡೆಗಳಲ್ಲಿ 1 ವರ್ಷ ಈ ಸಿನಿಮಾ ಓಡಿದೆ. 25 ವರ್ಷಗಳ ಹಿಂದೆಯೇ 35 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ಚಿತ್ರವಿದು. ಈ ಚಿತ್ರವನ್ನು ಈಗ ಮುನಿಸ್ವಾಮಿ ಅವರು ಮರು ಬಿಡುಗಡೆ ಮಾಡುತ್ತಿದ್ದಾರೆ. ಹಿಂದೆ ನೀವು ನೀಡಿದ ಗೆಲುವಿಗಿಂತ ದೊಡ್ದ ಗೆಲುವನ್ನು ಈಗ ನೀಡಿ’ ಎಂದರು‌.

‘ಯಜಮಾನ’ ಚಿತ್ರವನ್ನು DI ಬಳಸಿ 4K ಡಿಜೆಟಲ್ ಪ್ರೊಜೆಕ್ಷನ್‍ಗೆ ತಯಾರು ಮಾಡಲಾಗಿದೆ. ಇನ್ನು, ಮೋನೊ ಟ್ರ್ಯಾಕ್ ನಲ್ಲಿದ್ದ ಈ ಚಿತ್ರದ ಕಲಾವಿದರ ಧ್ವನಿಗಳನ್ನು ಸಹ 5.1 ಹಾಗೂ 7.1 ಡಿಜಿಟಲ್ ಸೌಂಡ್‍ಗೆ ವರ್ಗಾಯಿಸಲಾಗಿದೆ. ‘ಯಜಮಾನ’ ಚಿತ್ರದಲ್ಲಿ ವಿಷ್ಣುವರ್ಧನ್‍ ಜೊತೆಗೆ ಪ್ರೇಮ, ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಮೆಹರುನ್ನಿಸಾ ರೆಹಮಾನ್ ನಿರ್ಮಿಸಿದ್ದು, ಆರ್ ಶೇಷಾದ್ರಿ – ರಾಧಾ ಭಾರತಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ರಾಜೇಶ್‍ ರಾಮನಾಥ್‍ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago