ಮನರಂಜನೆ

ಮತ್ತೊಮ್ಮೆ ಬೆಳ್ಳಿ ತೆರೆಯ ಮೇಲೆ ವಜ್ರಮುನಿ; ‘ಯಲಾಕುನ್ನಿ’ ಟೀಸರ್‍ ಬಿಡುಗಡೆ

‘ಎಲಾ ಕುನ್ನಿ’ ಚಿತ್ರದಲ್ಲಿ ಕೋಮಲ್‍ ಹೇಗೆ ಕಾಣಿಸುತ್ತಾರೆ ಎಂದು ಗೊತ್ತಿದೆ. ಚಿತ್ರದ ಅವರ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ವಜ್ರಮುನಿ ತರಹ ಕೋಮಲ್‍ ಕಾಣಬಹುದು, ಆದರೆ ವಜ್ರಮುನಿಯಾಗಿ ಅವರ ನಟನೆ ಹೇಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ಉತ್ತರ ಸಿಕ್ಕಿದೆ.

‘ಯಲಾಕುನ್ನಿ’ ಚಿತ್ರದ ಟೀಸರ್ ಇತ್ತೀಚೆಗೆ ನಡೆದ ‘ಗಿಚ್ಚಿ ಗಿಲಿಗಿಲಿ’ ಫೈನಲ್ ನಲ್ಲಿ ಬಿಡುಗಡೆಯಾಯಿತು. ಕೋಮಲ್ ಕುಮಾರ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಟೀಸರ್ ಲಭ್ಯವಿದೆ. ಕೋಮಲ್ ಕುಮಾರ್ ಅವರ ವಜ್ರಮುನಿ ಲುಕ್‍ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ಈ ಚಿತ್ರವನ್ನು ನಿರ್ಮಿಸಿದ್ದು, ಹೊಸ ಪ್ರತಿಭೆ ಎನ್‍.ಆರ್. ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.

ಅಂದಹಾಗೆ, ಈ ‘ಯಲಾ ಕುನ್ನಿ’ ಎನ್ನುವುದು ವಜ್ರಮುನಿ ಅವರ ಜನಪ್ರಿಯ ಸಂಭಾಷಣೆ. ಈ ಸಂಭಾಷಣೆಯನ್ನು ಅವರು ‘ಸಂಪತ್ತಿಗೆ ಸವಾಲ್‍ ಚಿತ್ರದಲ್ಲಿ ಸಾಹುಕಾರ್ ಸಿದ್ಧಪ್ಪನಾಗಿ ಹೇಳಿದ್ದರು. ಅಲ್ಲಿಂದ ಈ ಸಂಭಾಷಣೆ ಸಾಕಷ್ಟು ಜನಪ್ರಿಯವಾಗಿದ್ದು, ಇದೀಗ ಅದೇ ‘ಯಲಾ ಕುನ್ನಿ’ ಎಂಬ ಪದಗಳು ಕೋಮಲ್‍ ಅಭಿನಯದ ಚಿತ್ರದ ಶೀರ್ಷಿಕೆಯಾಗಿದೆ. ಈ ಚಿತ್ರಕ್ಕೆ ‘ಮೇರಾ ನಾಮ್‍ ವಜ್ರಮುನಿ’ ಎಂಬ ಅಡಿಬರಹವೂ ಇದೆ.

‘ಯಲಾ ಕುನ್ನಿ’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಕುಂಬಳಕಾಯಿ ಒಡೆಯಲಾಗಿದೆ. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡವು, ಸದ್ಯ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಈ ಚಿತ್ರಕ್ಕಾಗಿ ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ.

ಕೋಮಲ್‍ಗೆ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ‘ಗಿಚ್ಚಿಗಿಲಿಗಿಲಿ’ಯ ಅಮೃತಾ ನಟಿಸಿದ್ದಾರೆ. ಜೊತೆಗೆ ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ ಆರ್ ಪೇಟೆ, ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರ್‍ಕರ್, ಮಾನಸಿ ಸುಧೀರ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ ಮುಂತಾದವರು ನಟಿಸಿದ್ದಾರೆ. ಮಯೂರ್ ಪಟೇಲ್‍ ಮೊದಲ ಬಾರಿಗೆ ಖಳನಾಯಕನಾಗಿ ನಟಿಸಿದ್ದಾರೆ.

ವಿಶೇಷವೆಂದರೆ, ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದ್ದಾರೆ.

ಭೂಮಿಕಾ

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

7 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

10 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

11 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

11 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

11 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

11 hours ago