ಮನರಂಜನೆ

ಮತ್ತೊಮ್ಮೆ ಬೆಳ್ಳಿ ತೆರೆಯ ಮೇಲೆ ವಜ್ರಮುನಿ; ‘ಯಲಾಕುನ್ನಿ’ ಟೀಸರ್‍ ಬಿಡುಗಡೆ

‘ಎಲಾ ಕುನ್ನಿ’ ಚಿತ್ರದಲ್ಲಿ ಕೋಮಲ್‍ ಹೇಗೆ ಕಾಣಿಸುತ್ತಾರೆ ಎಂದು ಗೊತ್ತಿದೆ. ಚಿತ್ರದ ಅವರ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ವಜ್ರಮುನಿ ತರಹ ಕೋಮಲ್‍ ಕಾಣಬಹುದು, ಆದರೆ ವಜ್ರಮುನಿಯಾಗಿ ಅವರ ನಟನೆ ಹೇಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ಉತ್ತರ ಸಿಕ್ಕಿದೆ.

‘ಯಲಾಕುನ್ನಿ’ ಚಿತ್ರದ ಟೀಸರ್ ಇತ್ತೀಚೆಗೆ ನಡೆದ ‘ಗಿಚ್ಚಿ ಗಿಲಿಗಿಲಿ’ ಫೈನಲ್ ನಲ್ಲಿ ಬಿಡುಗಡೆಯಾಯಿತು. ಕೋಮಲ್ ಕುಮಾರ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಟೀಸರ್ ಲಭ್ಯವಿದೆ. ಕೋಮಲ್ ಕುಮಾರ್ ಅವರ ವಜ್ರಮುನಿ ಲುಕ್‍ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ಈ ಚಿತ್ರವನ್ನು ನಿರ್ಮಿಸಿದ್ದು, ಹೊಸ ಪ್ರತಿಭೆ ಎನ್‍.ಆರ್. ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.

ಅಂದಹಾಗೆ, ಈ ‘ಯಲಾ ಕುನ್ನಿ’ ಎನ್ನುವುದು ವಜ್ರಮುನಿ ಅವರ ಜನಪ್ರಿಯ ಸಂಭಾಷಣೆ. ಈ ಸಂಭಾಷಣೆಯನ್ನು ಅವರು ‘ಸಂಪತ್ತಿಗೆ ಸವಾಲ್‍ ಚಿತ್ರದಲ್ಲಿ ಸಾಹುಕಾರ್ ಸಿದ್ಧಪ್ಪನಾಗಿ ಹೇಳಿದ್ದರು. ಅಲ್ಲಿಂದ ಈ ಸಂಭಾಷಣೆ ಸಾಕಷ್ಟು ಜನಪ್ರಿಯವಾಗಿದ್ದು, ಇದೀಗ ಅದೇ ‘ಯಲಾ ಕುನ್ನಿ’ ಎಂಬ ಪದಗಳು ಕೋಮಲ್‍ ಅಭಿನಯದ ಚಿತ್ರದ ಶೀರ್ಷಿಕೆಯಾಗಿದೆ. ಈ ಚಿತ್ರಕ್ಕೆ ‘ಮೇರಾ ನಾಮ್‍ ವಜ್ರಮುನಿ’ ಎಂಬ ಅಡಿಬರಹವೂ ಇದೆ.

‘ಯಲಾ ಕುನ್ನಿ’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಕುಂಬಳಕಾಯಿ ಒಡೆಯಲಾಗಿದೆ. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡವು, ಸದ್ಯ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಈ ಚಿತ್ರಕ್ಕಾಗಿ ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ.

ಕೋಮಲ್‍ಗೆ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ‘ಗಿಚ್ಚಿಗಿಲಿಗಿಲಿ’ಯ ಅಮೃತಾ ನಟಿಸಿದ್ದಾರೆ. ಜೊತೆಗೆ ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ ಆರ್ ಪೇಟೆ, ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರ್‍ಕರ್, ಮಾನಸಿ ಸುಧೀರ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ ಮುಂತಾದವರು ನಟಿಸಿದ್ದಾರೆ. ಮಯೂರ್ ಪಟೇಲ್‍ ಮೊದಲ ಬಾರಿಗೆ ಖಳನಾಯಕನಾಗಿ ನಟಿಸಿದ್ದಾರೆ.

ವಿಶೇಷವೆಂದರೆ, ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

5 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

5 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

5 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

5 hours ago