ಮನರಂಜನೆ

ಯಲಾಕುನ್ನಿ ಬಿಡುಗಡೆ ದಿನಾಂಕ ದಿಢೀರ್ ಘೋಷಣೆ: 11 ದಿನಗಳಲ್ಲಿ ಬಿಡುಗಡೆ

ಕೋಮಲ್‍ ಅಭಿನಯದ ‘ನಮೋ ಭೂತಾತ್ಮ 2’ ಮತ್ತು ‘ಉಂಡೆನಾಮ’ ಚಿತ್ರಗಳು ಬಂದಿದ್ದು ಹೋಗಿದ್ದು ಗೊತ್ತಾಗಲೇ ಇಲ್ಲ. ಅವರ ಕೈಯಲ್ಲಿ ಒಂದಿಷ್ಟು ಚಿತ್ರಗಳಿದ್ದರೂ, ಅದ್ಯಾಕೋ ಅಂದುಕೊಂಡಂತೆ ಬಿಡುಗಡೆ ಆಗಲಿಲ್ಲ. ಇದೀಗ ಕೋಮಲ್‍ ಅಭಿನಯದ ‘ಯಲಾಕುನ್ನಿ’ ಬಿಡುಗಡೆ ದಿಢೀರ್‍ ಘೋಷಣೆಯಾಗಿದೆ. ಚಿತ್ರವು ಅಕ್ಟೋಬರ್.25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಷಯವನ್ನು ಕೋಮಲ್‍ ಸಹೋದರ ಜಗ್ಗೇಶ್‍, ಸೋಷಿಯಲ್‍ ಮೀಡಿಯಾ ಮೂಲಕ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೋಮಲ್‍, ‘ಅಕ್ಟೋಬರ್.25ಕ್ಕೆ ಕೋಮಲ್ ನಟನೆಯ ‘ಯಲಾಕನ್ನಿ’ ರಾಜ್ಯಾದ್ಯಂತ ನಿಮ್ಮ ನೆಚ್ಚಿನ ಚಿತ್ರಮಂದಿರದಲ್ಲಿ ಬಿಡುಗಡೆ. ಕೋಮಲ್ ಮುಖದಲ್ಲಿ ವಜ್ರಮುನಿರವರ ಅದ್ಭುತ ಅನಾವರಣ. ಹಾಸ್ಯ ಸಾಂಸಾರಿಕ ಚಿತ್ರ. ಹರಸಿ ಹಾರೈಸಿ’ ಎಂದು ಅವರು ವಿನಂತಿಸಿದ್ದಾರೆ.

‘ಯಲಾಕುನ್ನಿ’ ಚಿತ್ರದ ಚಿತ್ರೀಕರಣ ಮುಗಿದು ಕೆಲವು ತಿಂಗಳುಗಳಾಗಿದ್ದು, ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಆದರೆ, ಚಿತ್ರ ಬಿಡುಗಡೆ ಯಾವಾಗ ಎಂದು ಚಿತ್ರತಂಡ ಘೋಷಿಸಿರಲಿಲ್ಲ. ಇದೀಗ 11 ದಿನಗಳಿವೆ ಎನ್ನುವಾಗ, ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಅಕ್ಟೋಬರ್‍.25ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಯಲಾಕುನ್ನಿ’ ಚಿತ್ರವನ್ನು ಕೋಮಲ್‍, ಸಹನಾ ಮೂರ್ತಿ ಜೊತೆಗೆ ನಿರ್ಮಿಸುತ್ತಿದ್ದು, ಎನ್‍.ಆರ್.ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಕೋಮಲ್ ಇದೇ ಮೊದಲ ಬಾರಿಗೆ ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌. ಕೋಮಲ್‍ಗೆ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ‘ಗಿಚ್ಚಿಗಿಲಿಗಿಲಿ’ಯ ಅಮೃತಾ ಬಣ್ಣ ಹಚ್ಚಿದ್ದಾರೆ.

ಕೋಮಲ್ ಜೊತೆಗೆ ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ.ಆರ್.ಪೇಟೆ, ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರ್‍ಕರ್, ಮಾನಸಿ ಸುಧೀರ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ, ಮಹಾಂತೇಶ್, ಬೌಬೌ ಜಯರಾಮ್ ಮುಂತಾದವರು ನಟಿಸಿದ್ದಾರೆ. ವಜ್ರಮುನಿ ಅವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸಿದ್ದು, ಮಯೂರ್ ಪಟೇಲ್ ಖಳ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಧರ್ಮ ವಿಶ್ ಸಂಗೀತ, ಭದ್ರಾವತಿ ಹಾಲೇಶ್‍ ಅವರ ಛಾಯಾಗ್ರಹಣವಿದೆ.

 

ಆಂದೋಲನ ಡೆಸ್ಕ್

Recent Posts

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

13 mins ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

21 mins ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

31 mins ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

36 mins ago

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

46 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

55 mins ago