ಮನರಂಜನೆ

ಯಲಾಕುನ್ನಿ ಬಿಡುಗಡೆ ದಿನಾಂಕ ದಿಢೀರ್ ಘೋಷಣೆ: 11 ದಿನಗಳಲ್ಲಿ ಬಿಡುಗಡೆ

ಕೋಮಲ್‍ ಅಭಿನಯದ ‘ನಮೋ ಭೂತಾತ್ಮ 2’ ಮತ್ತು ‘ಉಂಡೆನಾಮ’ ಚಿತ್ರಗಳು ಬಂದಿದ್ದು ಹೋಗಿದ್ದು ಗೊತ್ತಾಗಲೇ ಇಲ್ಲ. ಅವರ ಕೈಯಲ್ಲಿ ಒಂದಿಷ್ಟು ಚಿತ್ರಗಳಿದ್ದರೂ, ಅದ್ಯಾಕೋ ಅಂದುಕೊಂಡಂತೆ ಬಿಡುಗಡೆ ಆಗಲಿಲ್ಲ. ಇದೀಗ ಕೋಮಲ್‍ ಅಭಿನಯದ ‘ಯಲಾಕುನ್ನಿ’ ಬಿಡುಗಡೆ ದಿಢೀರ್‍ ಘೋಷಣೆಯಾಗಿದೆ. ಚಿತ್ರವು ಅಕ್ಟೋಬರ್.25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಷಯವನ್ನು ಕೋಮಲ್‍ ಸಹೋದರ ಜಗ್ಗೇಶ್‍, ಸೋಷಿಯಲ್‍ ಮೀಡಿಯಾ ಮೂಲಕ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೋಮಲ್‍, ‘ಅಕ್ಟೋಬರ್.25ಕ್ಕೆ ಕೋಮಲ್ ನಟನೆಯ ‘ಯಲಾಕನ್ನಿ’ ರಾಜ್ಯಾದ್ಯಂತ ನಿಮ್ಮ ನೆಚ್ಚಿನ ಚಿತ್ರಮಂದಿರದಲ್ಲಿ ಬಿಡುಗಡೆ. ಕೋಮಲ್ ಮುಖದಲ್ಲಿ ವಜ್ರಮುನಿರವರ ಅದ್ಭುತ ಅನಾವರಣ. ಹಾಸ್ಯ ಸಾಂಸಾರಿಕ ಚಿತ್ರ. ಹರಸಿ ಹಾರೈಸಿ’ ಎಂದು ಅವರು ವಿನಂತಿಸಿದ್ದಾರೆ.

‘ಯಲಾಕುನ್ನಿ’ ಚಿತ್ರದ ಚಿತ್ರೀಕರಣ ಮುಗಿದು ಕೆಲವು ತಿಂಗಳುಗಳಾಗಿದ್ದು, ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಆದರೆ, ಚಿತ್ರ ಬಿಡುಗಡೆ ಯಾವಾಗ ಎಂದು ಚಿತ್ರತಂಡ ಘೋಷಿಸಿರಲಿಲ್ಲ. ಇದೀಗ 11 ದಿನಗಳಿವೆ ಎನ್ನುವಾಗ, ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಅಕ್ಟೋಬರ್‍.25ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಯಲಾಕುನ್ನಿ’ ಚಿತ್ರವನ್ನು ಕೋಮಲ್‍, ಸಹನಾ ಮೂರ್ತಿ ಜೊತೆಗೆ ನಿರ್ಮಿಸುತ್ತಿದ್ದು, ಎನ್‍.ಆರ್.ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಕೋಮಲ್ ಇದೇ ಮೊದಲ ಬಾರಿಗೆ ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌. ಕೋಮಲ್‍ಗೆ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ‘ಗಿಚ್ಚಿಗಿಲಿಗಿಲಿ’ಯ ಅಮೃತಾ ಬಣ್ಣ ಹಚ್ಚಿದ್ದಾರೆ.

ಕೋಮಲ್ ಜೊತೆಗೆ ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ.ಆರ್.ಪೇಟೆ, ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರ್‍ಕರ್, ಮಾನಸಿ ಸುಧೀರ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ, ಮಹಾಂತೇಶ್, ಬೌಬೌ ಜಯರಾಮ್ ಮುಂತಾದವರು ನಟಿಸಿದ್ದಾರೆ. ವಜ್ರಮುನಿ ಅವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸಿದ್ದು, ಮಯೂರ್ ಪಟೇಲ್ ಖಳ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಧರ್ಮ ವಿಶ್ ಸಂಗೀತ, ಭದ್ರಾವತಿ ಹಾಲೇಶ್‍ ಅವರ ಛಾಯಾಗ್ರಹಣವಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago