ಮನರಂಜನೆ

ಡಿಸೆಂಬರ್ ತಿಂಗಳಲ್ಲಿ ರಾವಣ ಆಗ್ತಾರೆ ಯಶ್‍; ‘ರಾಮಾಯಣ’ಕ್ಕೆ ಚಿತ್ರೀಕರಣ

ಬಾಲಿವುಡ್‍ನಲ್ಲಿ ನಿರ್ಮಾಣವಾಗುತ್ತಿರುವ ಬಹುಕೋಟಿ ವೆಚ್ಚದ ‘ರಾಮಾಯಣ’ ಚಿತ್ರದಲ್ಲಿ ಯಶ್‍ ಬರೀ ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಳ್ಳುತ್ತಿರುವ ವಿಷಯ ಗೊತ್ತೇ ಇತ್ತು. ಈ ಕುರಿತು ಯಶ್‍ ಕೆಲವು ತಿಂಗಳುಗಳ ಹಿಂದೆ ಅಧಿಕೃತವಾಗಿ ಘೋಷಿಸಿದ್ದರು. ಈಗ ಅವರು ಡಿಸೆಂಬರ್‍ ತಿಂಗಳಿನಿಂದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ತಯಾರಾಗಲಿದ್ದು, ಈ ಪೈಕಿ ಮೊದಲನೆಯ ಭಾಗದ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಮೂಲಗಳ ಪ್ರಕಾರ, ಮೊದಲ ಭಾಗದ ಚಿತ್ರಕ್ಕೆ ರಣಬೀರ್‍ ಕಪೂರ್ ‍ಬಹುತೇಕ ಚಿತ್ರೀಕರಣ ಮುಗಿಸಿದ್ದಾರಂತೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣ ಮುಗಿಸಿ, ಅಕ್ಟೋಬರ್‍ನಲ್ಲಿ ಸಂಜಯ್‍ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್‍ ವಾರ್‍’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರಂತೆ. ಇನ್ನು, ಯಶ್‍ ಈ ವರ್ಷದ ಡಿಸೆಂಬರ್‍ನಲ್ಲಿ ಚಿತ್ರಕ್ಕೆ ಡೇಟ್ ಕೊಟ್ಟರೆ, ಸನ್ನಿ ಡಿಯೋಲ್‍ ಮುಂದಿನ ವರ್ಷದ ಏಪ್ರಿಲ್‍ನಲ್ಲಿ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರಂತೆ. ಮುಂದಿನ ವರ್ಷದ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಲಿದ್ದು, ವರ್ಷದ ಅಂತ್ಯಕ್ಕೆ ಚಿತ್ರ ಬಿಡುಗಡೆ ಆಗುವ ಸಾಧ್ಯತೆ ಇದೆ.

ಈ ಹಿಂದೆ ‘ದಂಗಲ್‍’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್‍ ತಿವಾರಿ, ಈ ‘ರಾಮಾಯಣ’ ಚಿತ್ರದ ನಿರ್ದೇಶಕರು. ರಾಮನಾಗಿ ರಣಬೀರ್ ‍ಕಪೂರ್‍ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್‍, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದು, ಯಶ್‍ ಈ ಚಿತ್ರದಲ್ಲಿ ರಾವಣನಾಗಿ ನಟಿಸಲಿದ್ದಾರೆ.

‘ರಾಮಾಯಣ’ ಚಿತ್ರವನ್ನು ಪ್ರೈಮ್‍ ಫೋಕಸ್‍ ಸ್ಟುಡಿಯೋಸ್‍ನ ನಮಿತ್‍ ಮಲ್ಹೋತ್ರಾ ನಿರ್ಮಿಸುತ್ತಿದ್ದು, ಈ ಚಿತ್ರದ ನಿರ್ಮಾಣದಲ್ಲಿ ಯಶ್‍ ಅವರ ಮಾನ್ಸ್ಟರ್‍ ಮೈಂಡ್‍ ಕ್ರಿಯೇಷನ್ಸ್ ಸಹ ಸೇರಿಕೊಂಡಿದೆ.

ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಯು ‘ಟಾಕ್ಸಿಕ್’ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿದೆ. ಕೆ.ವಿ.ಎನ್‍ ಪ್ರೊಡಕ್ಷನ್ಸ್ ಜೊತೆಗೆ ಪಾಲುದಾರಿಕೆಯನ್ನು ಹೊಂದಿದೆ. ಈ ಚಿತ್ರದ ಚಿತ್ರೀಕರಣ ಸದ್ಯ ಬೆಂಗಳೂರಿನಲ್ಲಿ ಭರದಿಂದ ಸಾಗಿದೆ.

ಭೂಮಿಕಾ

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

2 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

3 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

3 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

4 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

5 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

5 hours ago