ಬಾಲಿವುಡ್ನಲ್ಲಿ ನಿರ್ಮಾಣವಾಗುತ್ತಿರುವ ಬಹುಕೋಟಿ ವೆಚ್ಚದ ‘ರಾಮಾಯಣ’ ಚಿತ್ರದಲ್ಲಿ ಯಶ್ ಬರೀ ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಳ್ಳುತ್ತಿರುವ ವಿಷಯ ಗೊತ್ತೇ ಇತ್ತು. ಈ ಕುರಿತು ಯಶ್ ಕೆಲವು ತಿಂಗಳುಗಳ ಹಿಂದೆ ಅಧಿಕೃತವಾಗಿ ಘೋಷಿಸಿದ್ದರು. ಈಗ ಅವರು ಡಿಸೆಂಬರ್ ತಿಂಗಳಿನಿಂದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ತಯಾರಾಗಲಿದ್ದು, ಈ ಪೈಕಿ ಮೊದಲನೆಯ ಭಾಗದ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಮೂಲಗಳ ಪ್ರಕಾರ, ಮೊದಲ ಭಾಗದ ಚಿತ್ರಕ್ಕೆ ರಣಬೀರ್ ಕಪೂರ್ ಬಹುತೇಕ ಚಿತ್ರೀಕರಣ ಮುಗಿಸಿದ್ದಾರಂತೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣ ಮುಗಿಸಿ, ಅಕ್ಟೋಬರ್ನಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್ ವಾರ್’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರಂತೆ. ಇನ್ನು, ಯಶ್ ಈ ವರ್ಷದ ಡಿಸೆಂಬರ್ನಲ್ಲಿ ಚಿತ್ರಕ್ಕೆ ಡೇಟ್ ಕೊಟ್ಟರೆ, ಸನ್ನಿ ಡಿಯೋಲ್ ಮುಂದಿನ ವರ್ಷದ ಏಪ್ರಿಲ್ನಲ್ಲಿ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರಂತೆ. ಮುಂದಿನ ವರ್ಷದ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಲಿದ್ದು, ವರ್ಷದ ಅಂತ್ಯಕ್ಕೆ ಚಿತ್ರ ಬಿಡುಗಡೆ ಆಗುವ ಸಾಧ್ಯತೆ ಇದೆ.
ಈ ಹಿಂದೆ ‘ದಂಗಲ್’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್ ತಿವಾರಿ, ಈ ‘ರಾಮಾಯಣ’ ಚಿತ್ರದ ನಿರ್ದೇಶಕರು. ರಾಮನಾಗಿ ರಣಬೀರ್ ಕಪೂರ್ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದು, ಯಶ್ ಈ ಚಿತ್ರದಲ್ಲಿ ರಾವಣನಾಗಿ ನಟಿಸಲಿದ್ದಾರೆ.
‘ರಾಮಾಯಣ’ ಚಿತ್ರವನ್ನು ಪ್ರೈಮ್ ಫೋಕಸ್ ಸ್ಟುಡಿಯೋಸ್ನ ನಮಿತ್ ಮಲ್ಹೋತ್ರಾ ನಿರ್ಮಿಸುತ್ತಿದ್ದು, ಈ ಚಿತ್ರದ ನಿರ್ಮಾಣದಲ್ಲಿ ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹ ಸೇರಿಕೊಂಡಿದೆ.
ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಯು ‘ಟಾಕ್ಸಿಕ್’ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿದೆ. ಕೆ.ವಿ.ಎನ್ ಪ್ರೊಡಕ್ಷನ್ಸ್ ಜೊತೆಗೆ ಪಾಲುದಾರಿಕೆಯನ್ನು ಹೊಂದಿದೆ. ಈ ಚಿತ್ರದ ಚಿತ್ರೀಕರಣ ಸದ್ಯ ಬೆಂಗಳೂರಿನಲ್ಲಿ ಭರದಿಂದ ಸಾಗಿದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…