ಮನರಂಜನೆ

‘ಟಾಕ್ಸಿಕ್‍’ ಚಿತ್ರಕ್ಕಾಗಿ ಹೊಸ ಲುಕ್‍ನಲ್ಲಿ ಯಶ್‍

ಕಳೆದ ಕೆಲವು ವರ್ಷಗಳಿಂದ ಒಂದೇ ಗೆಟಪ್‍ನಲ್ಲಿದ್ದ ಯಶ್‍, ಇದೀಗ ತಮ್ಮ ಗೆಟಪ್‍ ಬದಲಿಸಿದ್ದಾರೆ. ಕೂದಲು ಕತ್ತರಿಸಿ ಹೊಸ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಹೊಸ ಲುಕ್‍ನಲ್ಲಿ ಇದೇ ಮೊದಲ ಬಹಿರಂಗವಾಗಿ ಕಾಣಿಸಿಕೊಂಡಿದ್ದಾರೆ.

ಶುಕ್ರವಾರ, ಮುಂಬೈನಲ್ಲಿ ಮುಕೇಶ್‍ ಅಂಬಾನಿ ಅವರ ಮಗ ಅನಂತ್‍ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಇತ್ತು. ಈ ಸಂದರ್ಭದಲ್ಲಿ ಹಲವು ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಕನ್ನಡದಿಂದ ಯಶ್‍ ಸಹ ಮದುವೆಯಲ್ಲಿ ಭಾಗವಹಿಸಿದ್ದರು. ಮುಂಬೈ ಏರ್‍ಪೋರ್ಟ್‍ನಲ್ಲಿ ಯಶ್‍ ಕಾಣಿಸಿಕೊಂಡಾಗ, ಅವರ ಹೊಸ ಲುಕ್‍ ಬಹಳ ವೈರಲ್‍ ಆಗಿದೆ.

ಅಂದಹಾಗೆ, ಯಶ್‍ ಈ ಗೆಟಪ್‍ ಮಾಡಿಸಿಕೊಂಡಿರುವುದು ತಮ್ಮ ಮುಂದಿನ ಚಿತ್ರ ‘ಟಾಕ್ಸಿಕ್‍’ಗಾಗಿ. ‘ಕೆಜಿಎಫ್‍’ಗಾಗಿ ಗಡ್ಡ ಬಿಟ್ಟಿದ್ದ ಯಶ್‍, ಅಲ್ಲಿಂದ ಇಲ್ಲಿಯವರೆಗೂ ಅದನ್ನು ಮುಂದುವರೆಸಿದ್ದಾರೆ. ಆದರೆ, ಅವರ ಉದ್ಧಗೂದಲಿಗೆ ಕತ್ತರಿ ಬಿದ್ದಿದೆ. ಯಶ್‍ ತಮ್ಮ ಕೂದಲು ಶಾರ್ಟ್ ಮಾಡಿಸಿದ್ದಾರೆ. ಇದೇ ಲುಕ್‍ನಲ್ಲಿ ಅವರು ‘ಟಾಕ್ಸಿಕ್‍’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಯಶ್‍ ಅಭಿನಯದ 19ನೇ ಚಿತ್ರವಾದ ‘ಟಾಕ್ಸಿಕ್‍’ ಈ ವರ್ಷದ ಆರಂಭದಲ್ಲಿ ಘೋಷಣೆಯಾಗಿತ್ತು. ಅಲ್ಲಿಂದ ಚಿತ್ರದ ಕುರಿತು ಹಲವು ಸುದ್ದಿಗಳು ಕೇಳಿಬರುತ್ತಲೇ ಇವೆ. ಸದ್ಯಕ್ಕೆ ಹೇಳುವುದಾದರೆ, ಈ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ನಡೆಯುತ್ತಿದ್ದು, ಯಶ್‍ ಜೊತೆಗೆ ನಯನತಾರಾ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯಡಿ ಕೋನಾ ವೆಂಕಟ್‍ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಇದಕ್ಕೂ ಮೊದಲು ಚಿತ್ರವನ್ನು ಮುಂದಿನ ವರ್ಷ ಏಪ್ರಿಲ್‍ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ, ಸದ್ಯದ ಮಟ್ಟಿಗೆ ಇದು ಅನುಮಾನವಾಗಿದ್ದು, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.

ಅಂದಹಾಗೆ, ಭಾರತ ಮತ್ತು ಲಂಡನ್‍ನಲ್ಲಿ ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ನಡೆಯಲಿದ್ದು, ಈ ಪೈಕಿ ಲಂಡನ್‍ನಲ್ಲೇ 150ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

50 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago