ಕಳೆದ ಕೆಲವು ವರ್ಷಗಳಿಂದ ಒಂದೇ ಗೆಟಪ್ನಲ್ಲಿದ್ದ ಯಶ್, ಇದೀಗ ತಮ್ಮ ಗೆಟಪ್ ಬದಲಿಸಿದ್ದಾರೆ. ಕೂದಲು ಕತ್ತರಿಸಿ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಹೊಸ ಲುಕ್ನಲ್ಲಿ ಇದೇ ಮೊದಲ ಬಹಿರಂಗವಾಗಿ ಕಾಣಿಸಿಕೊಂಡಿದ್ದಾರೆ.
ಶುಕ್ರವಾರ, ಮುಂಬೈನಲ್ಲಿ ಮುಕೇಶ್ ಅಂಬಾನಿ ಅವರ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಇತ್ತು. ಈ ಸಂದರ್ಭದಲ್ಲಿ ಹಲವು ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಕನ್ನಡದಿಂದ ಯಶ್ ಸಹ ಮದುವೆಯಲ್ಲಿ ಭಾಗವಹಿಸಿದ್ದರು. ಮುಂಬೈ ಏರ್ಪೋರ್ಟ್ನಲ್ಲಿ ಯಶ್ ಕಾಣಿಸಿಕೊಂಡಾಗ, ಅವರ ಹೊಸ ಲುಕ್ ಬಹಳ ವೈರಲ್ ಆಗಿದೆ.
ಅಂದಹಾಗೆ, ಯಶ್ ಈ ಗೆಟಪ್ ಮಾಡಿಸಿಕೊಂಡಿರುವುದು ತಮ್ಮ ಮುಂದಿನ ಚಿತ್ರ ‘ಟಾಕ್ಸಿಕ್’ಗಾಗಿ. ‘ಕೆಜಿಎಫ್’ಗಾಗಿ ಗಡ್ಡ ಬಿಟ್ಟಿದ್ದ ಯಶ್, ಅಲ್ಲಿಂದ ಇಲ್ಲಿಯವರೆಗೂ ಅದನ್ನು ಮುಂದುವರೆಸಿದ್ದಾರೆ. ಆದರೆ, ಅವರ ಉದ್ಧಗೂದಲಿಗೆ ಕತ್ತರಿ ಬಿದ್ದಿದೆ. ಯಶ್ ತಮ್ಮ ಕೂದಲು ಶಾರ್ಟ್ ಮಾಡಿಸಿದ್ದಾರೆ. ಇದೇ ಲುಕ್ನಲ್ಲಿ ಅವರು ‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಯಶ್ ಅಭಿನಯದ 19ನೇ ಚಿತ್ರವಾದ ‘ಟಾಕ್ಸಿಕ್’ ಈ ವರ್ಷದ ಆರಂಭದಲ್ಲಿ ಘೋಷಣೆಯಾಗಿತ್ತು. ಅಲ್ಲಿಂದ ಚಿತ್ರದ ಕುರಿತು ಹಲವು ಸುದ್ದಿಗಳು ಕೇಳಿಬರುತ್ತಲೇ ಇವೆ. ಸದ್ಯಕ್ಕೆ ಹೇಳುವುದಾದರೆ, ಈ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ನಡೆಯುತ್ತಿದ್ದು, ಯಶ್ ಜೊತೆಗೆ ನಯನತಾರಾ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯಡಿ ಕೋನಾ ವೆಂಕಟ್ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್ ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಇದಕ್ಕೂ ಮೊದಲು ಚಿತ್ರವನ್ನು ಮುಂದಿನ ವರ್ಷ ಏಪ್ರಿಲ್ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ, ಸದ್ಯದ ಮಟ್ಟಿಗೆ ಇದು ಅನುಮಾನವಾಗಿದ್ದು, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.
ಅಂದಹಾಗೆ, ಭಾರತ ಮತ್ತು ಲಂಡನ್ನಲ್ಲಿ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣ ನಡೆಯಲಿದ್ದು, ಈ ಪೈಕಿ ಲಂಡನ್ನಲ್ಲೇ 150ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…