ಮನರಂಜನೆ

WAVES ಶೃಂಗಸಭೆಯಲ್ಲಿ ‘ರಾಮಾಯಣ’; ಮೊದಲ ನೋಟ ಬಿಡುಗಡೆ ಸಾಧ್ಯತೆ

‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಯಶ್‍ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗಷ್ಟೇ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಸುದ್ದಿ ಸಾಕಷ್ಟು ಸುದ್ದಿ ಮಾಡಿದೆ. ಹೀಗಿರುವಾಗಲೇ, ‘ರಾಮಾಯಣ’ ಚಿತ್ರದ ಮೊದಲ ನೋಟ ಸದ್ಯದಲ್ಲೇ ಬಿಡುಗಡೆಯಾಗುವ ಸೂಚನೆ ಸಿಕ್ಕಿದೆ.

ಮುಂಬೈನಲ್ಲಿ ಮೇ 1 ರಿಂದ 4ರ ವರೆಗೆ ವಿಶ್ವ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಸಮಿಟ್‍ (WAVES). ಈ ಶೃಂಗಸಭೆಯಲ್ಲಿ ಭಾರತೀಯ ಚಿತ್ರರಂಗದ ಹಲವು ಜನಪ್ರಿಯ ಕಲಾವಿದರು ಮತ್ತು ತಂತ್ರಜ್ಞರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದ ಟೀಸರ್‍ ಅಥವಾ ಮೊದಲ ನೋಟ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚಿತ್ರದ ಚಿತ್ರೀಕರಣ ಪ್ರಾರಂಭವಾಗಿ ಒಂದು ವರ್ಷವಾದರೂ, ಚಿತ್ರತಂಡದವರು ಚಿತ್ರವನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ. ಈಗ ಮೊದಲ ಬಾರಿಗೆ ಚಿತ್ರದ ತುಣುಕುಗಳು ಹೊರಬರುವ ಸಾಧ್ಯತೆ ಇದೆ.

‘ರಾಮಾಯಣ’ ಚಿತ್ರದಲ್ಲಿ ರಾಮನಾಗಿ ರಣಬೀರ್ ‍ಕಪೂರ್‍ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್‍, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಯಶ್‍, ರಾವಣನಾಗಿ ಅಭಿನಯಿಸುತ್ತಿದ್ದಾರೆ. ಲಾರಾ ದತ್ತ, ಇಂದಿರಾ ಕೃಷ್ಣನ್‍ ಮುಂತದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಹಿಂದೆ ‘ದಂಗಲ್‍’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್‍ ತಿವಾರಿ, ಈ ‘ರಾಮಾಯಣ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ಯಶ್‍ ಈ ಚಿತ್ರಕ್ಕೆ ಬರೀ ನಟರಷ್ಟೇ ಅಲ್ಲ, ಸಹನಿರ್ಮಾಪಕರೂ ಹೌದು. ಈ ಚಿತ್ರವನ್ನು ಪ್ರೈಮ್‍ ಫೋಕಸ್‍ ಸಂಸ್ಥೆಯ ನಮಿತ್‍ ಮಲ್ಹೋತ್ರಾ ಜೊತೆಗೆ ಸೇರಿ ನಿರ್ಮಾಣ ಮಾಡುತ್ತಿರುವುದು ವಿಶೇಷ.

‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೆಯ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಯುಗಾದ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

2 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

3 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

5 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

6 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

9 hours ago