ಮನರಂಜನೆ

ಕೊನೆಗೂ ಶುರುವಾಯ್ತು ಯಶ್‍ ಅಭಿನಯದ ‘ಟಾಕ್ಸಿಕ್‍’

‘ಕೆಜಿಎಫ್‍ 2’ ಚಿತ್ರ ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. ಆ ಚಿತ್ರದ ನಂತರ ಮುಂದೇನು ಎಂಬ ಪ್ರಶ್ನೆಗೆ, ‘ಟಾಕ್ಸಿಕ್‍’ ಎಂದು ಯಶ್‍ ಈಗಾಗಲೇ ಉತ್ತರಿಸಿದ್ದಾರೆ. ಆದರೆ, ಈ ಚಿತ್ರದ ಮುಹೂರ್ತ ಯಾವಾಗ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿರಲಿಲ್ಲ. ಈಗ ಕೊನೆಗೂ ಉತ್ತರ ಸಿಕ್ಕಿದ್ದು, ಗುರುವಾರ ಬ್ರಾಹ್ಮಿ ಮುಹೂರ್ತದಲ್ಲಿ ಚಿತ್ರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ.

‘ಟಾಕ್ಸಿಕ್‍’ ಚಿತ್ರದ ಅಧಿಕೃತ ಘೋಷಣೆ ಜನವರಿ 08ರಂದು ಆಗಿತ್ತು. ಆದರೆ, ಚಿತ್ರೀಕರಣ ಯಾವಾಗಿನಿಂದ ಪ್ರಾರಂಭ ಎಂದು ಚಿತ್ರತಂಡ ಹೇಳಿರಲಿಲ್ಲ. ಹೀಗಿರುವಾಗಲೇ, ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಲಂಡನ್‍ನಲ್ಲಿ ಶುರುವಾಗಿದೆ ಮತ್ತು ಬಹುತೇಕ ಚಿತ್ರೀಕರಣ ಸದ್ದಿಲ್ಲದೆ ಆಗಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಅದೆಲ್ಲ ಸುಳ್ಳು ಎಂದು ಮುಹೂರ್ತ ಮಾಡುವ ಮೂಲಕ ಚಿತ್ರತಂಡ ಘೋಷಿಸಿದೆ.

‘ಟಾಕ್ಸಿಕ್‍’ ಚಿತ್ರಕ್ಕಾಗಿ ಬೆಂಗಳೂರಿನ ಎಚ್‍.ಎಂ.ಟಿ ಫ್ಯಾಕ್ಟರಿಯಲ್ಲಿ ವಿಶೇಷ ಸೆಟ್‍ಗಳನ್ನು ನಿರ್ಮಾಣ ಮಾಡಲಾಗಿದ್ದು, ಅಲ್ಲೇ ಚಿತ್ರದ ಮುಹೂರ್ತ ಸಹ ನಡೆದಿದೆ. ಸಾಮಾನ್ಯವಾಗಿ, ಗಣ್ಯರನ್ನು ಕರೆಸಿ ಕ್ಯಾಮೆರಾ ಸ್ವಿಚ್ ಆನ್‍ ಮಾಡುವುದು ಮತ್ತು ಕ್ಲಾಪ್ ಮಾಡಿಸುವುದು ವಾಡಿಕೆ. ಆದರೆ, ಈ ಚಿತ್ರಕ್ಕೆ ಲೈಟ್ ಬಾಯ್‍ ಒಬ್ಬರಿಂದ ಕ್ಲಾಪ್‍ ಮಾಡಿಸಲಾಗಿದೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ.

ಚಿತ್ರದಲ್ಲಿ ಯಶ್‍ ಜೊತೆಗೆ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಚಿತ್ರತಂಡದವರು ಘೋಷಿಸಿಲ್ಲ. ಇದಕ್ಕೂ ಮುನ್ನ ಚಿತ್ರದ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದಲ್ಲದೆ ಶ್ರುತಿ ಹಾಸನ್‍, ಸಾಯಿಪಲ್ಲವಿ, ಕರೀನಾ ಕಪೂರ್‍, ನಯನತಾರಾ ಸೇರಿದಂತೆ ಸಾಕಷ್ಟು ನಟಿಯರ ಹೆಸರುಗಳು ಕೇಳಿಬರುತ್ತಿವೆ. ಆದರೆ, ಅಂತಿಮವಾಗಿ ಯಾರೆಲ್ಲಾ ಚಿತ್ರದಲ್ಲಿ ಇರುತ್ತಾರೆ ಎಂಬುದನ್ನು ಚಿತ್ರತಂಡದವರು ಇನ್ನಷ್ಟೇ ಘೋಷಿಸಬೇಕು.

ಇನ್ನು, ಇದಕ್ಕೂ ಮೊದಲು 2025ರ ಏಪ್ರಿಲ್‍ 10ರಂದು ಬಿಡುಗಡೆ ಆಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಇನ್ನು ಅಂದುಕೊಂಡ ದಿನಾಂಕಕ್ಕೆ ಕೇವಲ ಎಂಟು ತಿಂಗಳುಗಳು ಇರುವುದರಿಂದ, ಚಿತ್ರ ತಡವಾಗಿ ಶುರುವಾಗುತ್ತಿರುವುದರಿಂದ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಅದೇ ದಿನ ಪ್ರಭಾಸ್‍ ಅಭಿನಯದ ‘ದಿ ರಾಜಾ ಸಾಬ್‍’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ ಅಂದು ಚಿತ್ರ ಬಿಡುಗಡೆ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

31 mins ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

1 hour ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

2 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

2 hours ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

3 hours ago

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…

3 hours ago