ಮನರಂಜನೆ

ಕೊನೆಗೂ ಶುರುವಾಯ್ತು ಯಶ್‍ ಅಭಿನಯದ ‘ಟಾಕ್ಸಿಕ್‍’

‘ಕೆಜಿಎಫ್‍ 2’ ಚಿತ್ರ ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. ಆ ಚಿತ್ರದ ನಂತರ ಮುಂದೇನು ಎಂಬ ಪ್ರಶ್ನೆಗೆ, ‘ಟಾಕ್ಸಿಕ್‍’ ಎಂದು ಯಶ್‍ ಈಗಾಗಲೇ ಉತ್ತರಿಸಿದ್ದಾರೆ. ಆದರೆ, ಈ ಚಿತ್ರದ ಮುಹೂರ್ತ ಯಾವಾಗ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿರಲಿಲ್ಲ. ಈಗ ಕೊನೆಗೂ ಉತ್ತರ ಸಿಕ್ಕಿದ್ದು, ಗುರುವಾರ ಬ್ರಾಹ್ಮಿ ಮುಹೂರ್ತದಲ್ಲಿ ಚಿತ್ರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ.

‘ಟಾಕ್ಸಿಕ್‍’ ಚಿತ್ರದ ಅಧಿಕೃತ ಘೋಷಣೆ ಜನವರಿ 08ರಂದು ಆಗಿತ್ತು. ಆದರೆ, ಚಿತ್ರೀಕರಣ ಯಾವಾಗಿನಿಂದ ಪ್ರಾರಂಭ ಎಂದು ಚಿತ್ರತಂಡ ಹೇಳಿರಲಿಲ್ಲ. ಹೀಗಿರುವಾಗಲೇ, ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಲಂಡನ್‍ನಲ್ಲಿ ಶುರುವಾಗಿದೆ ಮತ್ತು ಬಹುತೇಕ ಚಿತ್ರೀಕರಣ ಸದ್ದಿಲ್ಲದೆ ಆಗಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಅದೆಲ್ಲ ಸುಳ್ಳು ಎಂದು ಮುಹೂರ್ತ ಮಾಡುವ ಮೂಲಕ ಚಿತ್ರತಂಡ ಘೋಷಿಸಿದೆ.

‘ಟಾಕ್ಸಿಕ್‍’ ಚಿತ್ರಕ್ಕಾಗಿ ಬೆಂಗಳೂರಿನ ಎಚ್‍.ಎಂ.ಟಿ ಫ್ಯಾಕ್ಟರಿಯಲ್ಲಿ ವಿಶೇಷ ಸೆಟ್‍ಗಳನ್ನು ನಿರ್ಮಾಣ ಮಾಡಲಾಗಿದ್ದು, ಅಲ್ಲೇ ಚಿತ್ರದ ಮುಹೂರ್ತ ಸಹ ನಡೆದಿದೆ. ಸಾಮಾನ್ಯವಾಗಿ, ಗಣ್ಯರನ್ನು ಕರೆಸಿ ಕ್ಯಾಮೆರಾ ಸ್ವಿಚ್ ಆನ್‍ ಮಾಡುವುದು ಮತ್ತು ಕ್ಲಾಪ್ ಮಾಡಿಸುವುದು ವಾಡಿಕೆ. ಆದರೆ, ಈ ಚಿತ್ರಕ್ಕೆ ಲೈಟ್ ಬಾಯ್‍ ಒಬ್ಬರಿಂದ ಕ್ಲಾಪ್‍ ಮಾಡಿಸಲಾಗಿದೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ.

ಚಿತ್ರದಲ್ಲಿ ಯಶ್‍ ಜೊತೆಗೆ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಚಿತ್ರತಂಡದವರು ಘೋಷಿಸಿಲ್ಲ. ಇದಕ್ಕೂ ಮುನ್ನ ಚಿತ್ರದ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದಲ್ಲದೆ ಶ್ರುತಿ ಹಾಸನ್‍, ಸಾಯಿಪಲ್ಲವಿ, ಕರೀನಾ ಕಪೂರ್‍, ನಯನತಾರಾ ಸೇರಿದಂತೆ ಸಾಕಷ್ಟು ನಟಿಯರ ಹೆಸರುಗಳು ಕೇಳಿಬರುತ್ತಿವೆ. ಆದರೆ, ಅಂತಿಮವಾಗಿ ಯಾರೆಲ್ಲಾ ಚಿತ್ರದಲ್ಲಿ ಇರುತ್ತಾರೆ ಎಂಬುದನ್ನು ಚಿತ್ರತಂಡದವರು ಇನ್ನಷ್ಟೇ ಘೋಷಿಸಬೇಕು.

ಇನ್ನು, ಇದಕ್ಕೂ ಮೊದಲು 2025ರ ಏಪ್ರಿಲ್‍ 10ರಂದು ಬಿಡುಗಡೆ ಆಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಇನ್ನು ಅಂದುಕೊಂಡ ದಿನಾಂಕಕ್ಕೆ ಕೇವಲ ಎಂಟು ತಿಂಗಳುಗಳು ಇರುವುದರಿಂದ, ಚಿತ್ರ ತಡವಾಗಿ ಶುರುವಾಗುತ್ತಿರುವುದರಿಂದ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಅದೇ ದಿನ ಪ್ರಭಾಸ್‍ ಅಭಿನಯದ ‘ದಿ ರಾಜಾ ಸಾಬ್‍’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ ಅಂದು ಚಿತ್ರ ಬಿಡುಗಡೆ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

2 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

4 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

4 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

5 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

5 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

6 hours ago