ಮನರಂಜನೆ

ಕೊನೆಗೂ ಶುರುವಾಯ್ತು ಯಶ್‍ ಅಭಿನಯದ ‘ಟಾಕ್ಸಿಕ್‍’

‘ಕೆಜಿಎಫ್‍ 2’ ಚಿತ್ರ ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. ಆ ಚಿತ್ರದ ನಂತರ ಮುಂದೇನು ಎಂಬ ಪ್ರಶ್ನೆಗೆ, ‘ಟಾಕ್ಸಿಕ್‍’ ಎಂದು ಯಶ್‍ ಈಗಾಗಲೇ ಉತ್ತರಿಸಿದ್ದಾರೆ. ಆದರೆ, ಈ ಚಿತ್ರದ ಮುಹೂರ್ತ ಯಾವಾಗ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿರಲಿಲ್ಲ. ಈಗ ಕೊನೆಗೂ ಉತ್ತರ ಸಿಕ್ಕಿದ್ದು, ಗುರುವಾರ ಬ್ರಾಹ್ಮಿ ಮುಹೂರ್ತದಲ್ಲಿ ಚಿತ್ರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ.

‘ಟಾಕ್ಸಿಕ್‍’ ಚಿತ್ರದ ಅಧಿಕೃತ ಘೋಷಣೆ ಜನವರಿ 08ರಂದು ಆಗಿತ್ತು. ಆದರೆ, ಚಿತ್ರೀಕರಣ ಯಾವಾಗಿನಿಂದ ಪ್ರಾರಂಭ ಎಂದು ಚಿತ್ರತಂಡ ಹೇಳಿರಲಿಲ್ಲ. ಹೀಗಿರುವಾಗಲೇ, ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಲಂಡನ್‍ನಲ್ಲಿ ಶುರುವಾಗಿದೆ ಮತ್ತು ಬಹುತೇಕ ಚಿತ್ರೀಕರಣ ಸದ್ದಿಲ್ಲದೆ ಆಗಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಅದೆಲ್ಲ ಸುಳ್ಳು ಎಂದು ಮುಹೂರ್ತ ಮಾಡುವ ಮೂಲಕ ಚಿತ್ರತಂಡ ಘೋಷಿಸಿದೆ.

‘ಟಾಕ್ಸಿಕ್‍’ ಚಿತ್ರಕ್ಕಾಗಿ ಬೆಂಗಳೂರಿನ ಎಚ್‍.ಎಂ.ಟಿ ಫ್ಯಾಕ್ಟರಿಯಲ್ಲಿ ವಿಶೇಷ ಸೆಟ್‍ಗಳನ್ನು ನಿರ್ಮಾಣ ಮಾಡಲಾಗಿದ್ದು, ಅಲ್ಲೇ ಚಿತ್ರದ ಮುಹೂರ್ತ ಸಹ ನಡೆದಿದೆ. ಸಾಮಾನ್ಯವಾಗಿ, ಗಣ್ಯರನ್ನು ಕರೆಸಿ ಕ್ಯಾಮೆರಾ ಸ್ವಿಚ್ ಆನ್‍ ಮಾಡುವುದು ಮತ್ತು ಕ್ಲಾಪ್ ಮಾಡಿಸುವುದು ವಾಡಿಕೆ. ಆದರೆ, ಈ ಚಿತ್ರಕ್ಕೆ ಲೈಟ್ ಬಾಯ್‍ ಒಬ್ಬರಿಂದ ಕ್ಲಾಪ್‍ ಮಾಡಿಸಲಾಗಿದೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ.

ಚಿತ್ರದಲ್ಲಿ ಯಶ್‍ ಜೊತೆಗೆ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಚಿತ್ರತಂಡದವರು ಘೋಷಿಸಿಲ್ಲ. ಇದಕ್ಕೂ ಮುನ್ನ ಚಿತ್ರದ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದಲ್ಲದೆ ಶ್ರುತಿ ಹಾಸನ್‍, ಸಾಯಿಪಲ್ಲವಿ, ಕರೀನಾ ಕಪೂರ್‍, ನಯನತಾರಾ ಸೇರಿದಂತೆ ಸಾಕಷ್ಟು ನಟಿಯರ ಹೆಸರುಗಳು ಕೇಳಿಬರುತ್ತಿವೆ. ಆದರೆ, ಅಂತಿಮವಾಗಿ ಯಾರೆಲ್ಲಾ ಚಿತ್ರದಲ್ಲಿ ಇರುತ್ತಾರೆ ಎಂಬುದನ್ನು ಚಿತ್ರತಂಡದವರು ಇನ್ನಷ್ಟೇ ಘೋಷಿಸಬೇಕು.

ಇನ್ನು, ಇದಕ್ಕೂ ಮೊದಲು 2025ರ ಏಪ್ರಿಲ್‍ 10ರಂದು ಬಿಡುಗಡೆ ಆಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಇನ್ನು ಅಂದುಕೊಂಡ ದಿನಾಂಕಕ್ಕೆ ಕೇವಲ ಎಂಟು ತಿಂಗಳುಗಳು ಇರುವುದರಿಂದ, ಚಿತ್ರ ತಡವಾಗಿ ಶುರುವಾಗುತ್ತಿರುವುದರಿಂದ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಅದೇ ದಿನ ಪ್ರಭಾಸ್‍ ಅಭಿನಯದ ‘ದಿ ರಾಜಾ ಸಾಬ್‍’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ ಅಂದು ಚಿತ್ರ ಬಿಡುಗಡೆ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

11 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

11 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

12 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

13 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

14 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

15 hours ago