ಕೆಜಿಎಫ್ ಚಿತ್ರ ಸರಣಿಯ ದೊಡ್ಡ ಯಶಸ್ಸಿನ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ ರಾಕಿಂಗ್ ಸ್ಟಾರ್ ಯಶ್ ಇದೀಗ ಚಿತ್ರ ನಿರ್ಮಾಣದತ್ತಲೂ ಮುಖ ಮಾಡಿದ್ದಾರೆ. ಹೌದು, ದಂಗಲ್ ಖ್ಯಾತಿಯ ನಿತೇಶ್ ತಿವಾರಿ ಬೃಹತ್ ಮಟ್ಟದಲ್ಲಿ ನಿರ್ದೇಶಿಸಲು ಹೊರಟಿರುವ ʼರಾಮಾಯಾಣʼ ಚಿತ್ರಕ್ಕೆ ಯಶ್ ಬಂಡವಾಳ ಹೂಡಲಿದ್ದಾರೆ.
ರಣ್ಬೀರ್ ಕಪೂರ್ ರಾಮನ ಪಾತ್ರದಲ್ಲಿ ಹಾಗೂ ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಲಿರುವ ಈ ಚಿತ್ರಕ್ಕೆ ನಿರ್ಮಾಪಕ ನಮಿತ್ ಮಲ್ಹೋತ್ರ ಬಂಡವಾಳ ಹೂಡಿದ್ದು, ಇದೀಗ ಯಶ್ ಸಹ ತಮ್ಮ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಮೂಲಕ ಕೈ ಜೋಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಯಶ್ ʼಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವುದು ನನ್ನ ಬಹುದಿನಗಳ ಕನಸಾಗಿದೆ. ಆ ಸಲುವಾಗಿ ನಾನು ಅತ್ಯುತ್ತಮ ವಿಎಫ್ಎಕ್ಸ್ ಸ್ಟುಡಿಯೋಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲು ಲಾಸ್ಏಂಜಲೀಸ್ನಲ್ಲಿದ್ದೆ. ಆಗ ನನಗೆ ಗೊತ್ತಾಗಿದ್ದು, ಈ ವಿಎಫ್ಎಕ್ಸ್ ಸ್ಟುಡಿಯೋ ಹಿಂದಿರುವುದು ಓರ್ವ ಭಾರತೀಯ ಎಂದು. ಅವರೇ ನಮಿತ್. ನನ್ನ ಮತ್ತು ನಮಿತ್ ನಡುವೆ ಸಾಕಷ್ಟು ಚರ್ಚೆಗಳು ನಡೆದವು. ನಮ್ಮ ನಡುವಿನ ಸಾಕಷ್ಟು ಕಲ್ಪನೆಗಳು ಒಂದೇ ರೀತಿಯಲ್ಲಿದ್ದವು. ಭಾರತೀಯ ಚಿತ್ರರಂಗದ ದೃಷ್ಟಿಯಲ್ಲಿ ನಮ್ಮ ವಿಚಾರಗಳು ಸಂಪೂರ್ಣವಾಗಿ ಹೊಂದಾಣಿಕೆಯಾಯಿತು. ಈ ಚರ್ಚೆಗಳ ಸಮಯದಲ್ಲಿ, ರಾಮಾಯಣದ ವಿಷಯವು ಬಂತುʼ ಎಂದಿದ್ದಾರೆ.
ಈ ಚಿತ್ರ ಮಾತ್ರವಲ್ಲದೇ ಯಶ್ ತಾವೇ ನಟಿಸುತ್ತಿರುವ, ಗೀತು ಮೋಹನ್ದಾಸ್ ನಿರ್ದೇಶನದ ʼಟಾಕ್ಸಿಕ್ʼ ಚಿತ್ರಕ್ಕೂ ಕೆವಿಎನ್ ಪ್ರೊಡಕ್ಷನ್ಸ್ ಜತೆ ಬಂಡವಾಳ ಹೂಡಿದ್ದಾರೆ.
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…
ವಾಷಿಂಗ್ಟನ್: ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಆಕ್ರೋಶ…
ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು) ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…