ಕೆಜಿಎಫ್ ಚಿತ್ರ ಸರಣಿಯ ದೊಡ್ಡ ಯಶಸ್ಸಿನ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ ರಾಕಿಂಗ್ ಸ್ಟಾರ್ ಯಶ್ ಇದೀಗ ಚಿತ್ರ ನಿರ್ಮಾಣದತ್ತಲೂ ಮುಖ ಮಾಡಿದ್ದಾರೆ. ಹೌದು, ದಂಗಲ್ ಖ್ಯಾತಿಯ ನಿತೇಶ್ ತಿವಾರಿ ಬೃಹತ್ ಮಟ್ಟದಲ್ಲಿ ನಿರ್ದೇಶಿಸಲು ಹೊರಟಿರುವ ʼರಾಮಾಯಾಣʼ ಚಿತ್ರಕ್ಕೆ ಯಶ್ ಬಂಡವಾಳ ಹೂಡಲಿದ್ದಾರೆ.
ರಣ್ಬೀರ್ ಕಪೂರ್ ರಾಮನ ಪಾತ್ರದಲ್ಲಿ ಹಾಗೂ ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಲಿರುವ ಈ ಚಿತ್ರಕ್ಕೆ ನಿರ್ಮಾಪಕ ನಮಿತ್ ಮಲ್ಹೋತ್ರ ಬಂಡವಾಳ ಹೂಡಿದ್ದು, ಇದೀಗ ಯಶ್ ಸಹ ತಮ್ಮ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಮೂಲಕ ಕೈ ಜೋಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಯಶ್ ʼಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವುದು ನನ್ನ ಬಹುದಿನಗಳ ಕನಸಾಗಿದೆ. ಆ ಸಲುವಾಗಿ ನಾನು ಅತ್ಯುತ್ತಮ ವಿಎಫ್ಎಕ್ಸ್ ಸ್ಟುಡಿಯೋಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲು ಲಾಸ್ಏಂಜಲೀಸ್ನಲ್ಲಿದ್ದೆ. ಆಗ ನನಗೆ ಗೊತ್ತಾಗಿದ್ದು, ಈ ವಿಎಫ್ಎಕ್ಸ್ ಸ್ಟುಡಿಯೋ ಹಿಂದಿರುವುದು ಓರ್ವ ಭಾರತೀಯ ಎಂದು. ಅವರೇ ನಮಿತ್. ನನ್ನ ಮತ್ತು ನಮಿತ್ ನಡುವೆ ಸಾಕಷ್ಟು ಚರ್ಚೆಗಳು ನಡೆದವು. ನಮ್ಮ ನಡುವಿನ ಸಾಕಷ್ಟು ಕಲ್ಪನೆಗಳು ಒಂದೇ ರೀತಿಯಲ್ಲಿದ್ದವು. ಭಾರತೀಯ ಚಿತ್ರರಂಗದ ದೃಷ್ಟಿಯಲ್ಲಿ ನಮ್ಮ ವಿಚಾರಗಳು ಸಂಪೂರ್ಣವಾಗಿ ಹೊಂದಾಣಿಕೆಯಾಯಿತು. ಈ ಚರ್ಚೆಗಳ ಸಮಯದಲ್ಲಿ, ರಾಮಾಯಣದ ವಿಷಯವು ಬಂತುʼ ಎಂದಿದ್ದಾರೆ.
ಈ ಚಿತ್ರ ಮಾತ್ರವಲ್ಲದೇ ಯಶ್ ತಾವೇ ನಟಿಸುತ್ತಿರುವ, ಗೀತು ಮೋಹನ್ದಾಸ್ ನಿರ್ದೇಶನದ ʼಟಾಕ್ಸಿಕ್ʼ ಚಿತ್ರಕ್ಕೂ ಕೆವಿಎನ್ ಪ್ರೊಡಕ್ಷನ್ಸ್ ಜತೆ ಬಂಡವಾಳ ಹೂಡಿದ್ದಾರೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…