yash upcoming ramayana movie
ಯಶ್ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣದಲ್ಲಿ ಯಶ್ ಭಾಗಿಯಾಗಲಿದ್ದು, ಅದಕ್ಕೂ ಮೊದಲು ಯಶ್, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದಿದ್ದಾರೆ.
‘ರಾಮಾಯಣ – ಭಾಗ 1’ರ ಚಿತ್ರೀಕರಣ ಮುಂದಿನ ವಾರದಿಂದ ಮುಂಬೈನಲ್ಲಿ ಪ್ರಾರಂಭವಾಗಲಿದೆಯಂತೆ. ಈ ಚಿತ್ರೀಕರಣದಲ್ಲಿ ಯಶ್ ಭಾಗವಹಿಸುತ್ತಿದ್ದು, ಅದಕ್ಕೂ ಮೊದಲು ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದಾರೆ. ತಾವು ಶಿವನ ಭಕ್ತನಾದ್ದರಿಂದ, ಶಿವನ ಆಶೀರ್ವಾದ ಪಡೆಯಲು ಬಂದೆ ಎಂದು ಯಶ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಈ ಹಿಂದೆ ‘ದಂಗಲ್’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್ ತಿವಾರಿ, ಈ ‘ರಾಮಾಯಣ’ ಚಿತ್ರದ ನಿರ್ದೇಶಕರು. ರಾಮನಾಗಿ ರಣಬೀರ್ ಕಪೂರ್ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರಾವಣನ ಪಾತ್ರವಲ್ಲದೆ, ಬೇರೆ ಯಾವುದೇ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಯಶ್ ಕಳೆದ ವರ್ಷ ನೀಡಿದ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
‘ರಾಮಯಾಣ’ ಚಿತ್ರದಲ್ಲಿ ಯಶ್, ರಾವಣನಾಗಿ ಅಭಿನಯಿಸುತ್ತಿರುವ ವಿಷಯ ಗೊತ್ತೇ ಇದೆ. ಯಶ್ ಈ ಚಿತ್ರದಲ್ಲಿ ಬರೀ ನಟರಷ್ಟೇ ಅಲ್ಲ, ಸಹನಿರ್ಮಾಪಕರೂ ಹೌದು. ಈ ಚಿತ್ರವನ್ನು ಪ್ರೈಮ್ ಫೋಕಸ್ ಸಂಸ್ಥೆಯ ನಮಿತ್ ಮಲ್ಹೋತ್ರಾ ಮತ್ತ ಯಶ್ ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದರೆ.
‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೆಯ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.
ಈ ಮಧ್ಯೆ, ‘ಟಾಕ್ಸಿಕ್’ ಚಿತ್ರದಲ್ಲೂ ಯಶ್ ನಟಿಸುತ್ತಿದ್ದು, ಈ ಚಿತ್ರವು 2026ರ ಮಾರ್ಚ್ 19ರಂದು ಯುಗಾದ ಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ.
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…