yash upcoming ramayana movie
ಯಶ್ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣದಲ್ಲಿ ಯಶ್ ಭಾಗಿಯಾಗಲಿದ್ದು, ಅದಕ್ಕೂ ಮೊದಲು ಯಶ್, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದಿದ್ದಾರೆ.
‘ರಾಮಾಯಣ – ಭಾಗ 1’ರ ಚಿತ್ರೀಕರಣ ಮುಂದಿನ ವಾರದಿಂದ ಮುಂಬೈನಲ್ಲಿ ಪ್ರಾರಂಭವಾಗಲಿದೆಯಂತೆ. ಈ ಚಿತ್ರೀಕರಣದಲ್ಲಿ ಯಶ್ ಭಾಗವಹಿಸುತ್ತಿದ್ದು, ಅದಕ್ಕೂ ಮೊದಲು ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದಾರೆ. ತಾವು ಶಿವನ ಭಕ್ತನಾದ್ದರಿಂದ, ಶಿವನ ಆಶೀರ್ವಾದ ಪಡೆಯಲು ಬಂದೆ ಎಂದು ಯಶ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಈ ಹಿಂದೆ ‘ದಂಗಲ್’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್ ತಿವಾರಿ, ಈ ‘ರಾಮಾಯಣ’ ಚಿತ್ರದ ನಿರ್ದೇಶಕರು. ರಾಮನಾಗಿ ರಣಬೀರ್ ಕಪೂರ್ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರಾವಣನ ಪಾತ್ರವಲ್ಲದೆ, ಬೇರೆ ಯಾವುದೇ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಯಶ್ ಕಳೆದ ವರ್ಷ ನೀಡಿದ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
‘ರಾಮಯಾಣ’ ಚಿತ್ರದಲ್ಲಿ ಯಶ್, ರಾವಣನಾಗಿ ಅಭಿನಯಿಸುತ್ತಿರುವ ವಿಷಯ ಗೊತ್ತೇ ಇದೆ. ಯಶ್ ಈ ಚಿತ್ರದಲ್ಲಿ ಬರೀ ನಟರಷ್ಟೇ ಅಲ್ಲ, ಸಹನಿರ್ಮಾಪಕರೂ ಹೌದು. ಈ ಚಿತ್ರವನ್ನು ಪ್ರೈಮ್ ಫೋಕಸ್ ಸಂಸ್ಥೆಯ ನಮಿತ್ ಮಲ್ಹೋತ್ರಾ ಮತ್ತ ಯಶ್ ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದರೆ.
‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೆಯ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.
ಈ ಮಧ್ಯೆ, ‘ಟಾಕ್ಸಿಕ್’ ಚಿತ್ರದಲ್ಲೂ ಯಶ್ ನಟಿಸುತ್ತಿದ್ದು, ಈ ಚಿತ್ರವು 2026ರ ಮಾರ್ಚ್ 19ರಂದು ಯುಗಾದ ಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ.
ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…
ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…