ಮನರಂಜನೆ

ಸಂಭಾವನೆಯಲ್ಲಿ ದಾಖಲೆ ಬರೆದ ಯಶ್…! ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲು

ಮುಂಬೈ: ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಮೊದಲ ಬಾರಿಗೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಕನ್ನಡದ ಸ್ಟಾರ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಹೌದು, ಅವರು ಬೇರೆ ಯಾರು ಅಲ್ಲ, ನಮ್ಮ ಕನ್ನಡ ಚಿತ್ರರಂಗದ ಖ್ಯಾತಿಯನ್ನು ವಿಶ್ವಾದ್ಯಂತ ಪಸರಿಸಿದ ಕೆಜಿಎಫ್ ಖ್ಯಾತಿ ರಾಕಿಂಗ್ ಸ್ಟಾರ್ ಯಶ್.

ಇತ್ತೀಚಿನ ದಿನಗಳಲ್ಲಿ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ಅಷ್ಟೇ ಅಲ್ಲ, ನಾಯಕರ ಸಂಭಾವನೆಯೂ ಹೆಚ್ಚಾಗಿರುವುದರಿಂದ ಖಳನಾಯಕರ ಸಂಭಾವನೆಯೂ ಹೆಚ್ಚಿದೆ. ಈಗ ಹೈ-ಬಜೆಟ್ ಚಿತ್ರಗಳಲ್ಲಿ ಮುಖ್ಯವಾಹಿನಿಯ ಹೀರೋಗಳು ವಿಲನ್ ಆಗುವ ಸಂಖ್ಯೆ ಹೆಚ್ಚುತ್ತಿದೆ. ಅವರಲ್ಲಿ ಕನ್ನಡದ ನಟರೊಬ್ಬರು ಚಿತ್ರವೊಂದಕ್ಕೆ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.

ಚಿತ್ರರಂಗದಲ್ಲಿ ಸಾಮಾನ್ಯವಾಗಿ ಬಿ-ಟೌನ್ ಮಂದಿಯೇ ಅತಿಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಬಳಿಕ ದಕ್ಷಿಣದ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್ ಮತ್ತು ಪ್ರಭಾಸ್ ಸೇರಿದಂತೆ ಹಲವು ನಟರು ದುಪಟ್ಟು ಸಂಭಾವನೆ ಪಡೆಯುತ್ತಿರುವುದು ವರದಿಯಾಗಿದೆ. ಇದೀಗ ಬಾಲಿವುಡ್ ನ್ ಶಾರುಖ್ ಖಾನ್, ಸಲ್ಮಾನ್, ರಣಬೀರ್ ಕಪೂರ್ ಸೇರಿದಂತೆ ದಕ್ಷಿಣ ನಟರ ಸಂಭಾವನೆಯನ್ನು ಮೀರಿಸಿ ನಮ್ಮ ಕನ್ನಡ ನಟ ಇತಿಹಾಸ ಬರೆದಿದ್ದಾರೆ.

ಬಾಲಿವುಡ್‌ ನ ನಿತೇಶ್ ತಿವಾರಿ ನಿರ್ದೇಶದಲ್ಲಿ ಮೂಡಿ ಬರುತ್ತಿರುವ ರಾಮಾಯಣದಲ್ಲಿ ಚಿತ್ರದಲ್ಲಿ ಯಶ್ ರಾವಣ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ(ವಿತರಣೆಯ ಪಾಲು ಮತ್ತು ಸಿನಿಮಾದ ಶುಲ್ಕ) ಇದೆ ಎಂದು ವರದಿಯಾಗಿದೆ. ಅಲ್ಲದೇ, ಈ ಚಿತ್ರದಲ್ಲಿನ ರಾಮನ ಪಾತ್ರಧಾರಿ ರಣಬೀರ್ ಕಪೂರ್ ಗಿಂತ ದುಪಟ್ಟು ಎಂದು ಹೇಳಲಾಗುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago