ಮುಂಬೈ: ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಮೊದಲ ಬಾರಿಗೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಕನ್ನಡದ ಸ್ಟಾರ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಹೌದು, ಅವರು ಬೇರೆ ಯಾರು ಅಲ್ಲ, ನಮ್ಮ ಕನ್ನಡ ಚಿತ್ರರಂಗದ ಖ್ಯಾತಿಯನ್ನು ವಿಶ್ವಾದ್ಯಂತ ಪಸರಿಸಿದ ಕೆಜಿಎಫ್ ಖ್ಯಾತಿ ರಾಕಿಂಗ್ ಸ್ಟಾರ್ ಯಶ್.
ಇತ್ತೀಚಿನ ದಿನಗಳಲ್ಲಿ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ಅಷ್ಟೇ ಅಲ್ಲ, ನಾಯಕರ ಸಂಭಾವನೆಯೂ ಹೆಚ್ಚಾಗಿರುವುದರಿಂದ ಖಳನಾಯಕರ ಸಂಭಾವನೆಯೂ ಹೆಚ್ಚಿದೆ. ಈಗ ಹೈ-ಬಜೆಟ್ ಚಿತ್ರಗಳಲ್ಲಿ ಮುಖ್ಯವಾಹಿನಿಯ ಹೀರೋಗಳು ವಿಲನ್ ಆಗುವ ಸಂಖ್ಯೆ ಹೆಚ್ಚುತ್ತಿದೆ. ಅವರಲ್ಲಿ ಕನ್ನಡದ ನಟರೊಬ್ಬರು ಚಿತ್ರವೊಂದಕ್ಕೆ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.
ಚಿತ್ರರಂಗದಲ್ಲಿ ಸಾಮಾನ್ಯವಾಗಿ ಬಿ-ಟೌನ್ ಮಂದಿಯೇ ಅತಿಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಬಳಿಕ ದಕ್ಷಿಣದ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್ ಮತ್ತು ಪ್ರಭಾಸ್ ಸೇರಿದಂತೆ ಹಲವು ನಟರು ದುಪಟ್ಟು ಸಂಭಾವನೆ ಪಡೆಯುತ್ತಿರುವುದು ವರದಿಯಾಗಿದೆ. ಇದೀಗ ಬಾಲಿವುಡ್ ನ್ ಶಾರುಖ್ ಖಾನ್, ಸಲ್ಮಾನ್, ರಣಬೀರ್ ಕಪೂರ್ ಸೇರಿದಂತೆ ದಕ್ಷಿಣ ನಟರ ಸಂಭಾವನೆಯನ್ನು ಮೀರಿಸಿ ನಮ್ಮ ಕನ್ನಡ ನಟ ಇತಿಹಾಸ ಬರೆದಿದ್ದಾರೆ.
ಬಾಲಿವುಡ್ ನ ನಿತೇಶ್ ತಿವಾರಿ ನಿರ್ದೇಶದಲ್ಲಿ ಮೂಡಿ ಬರುತ್ತಿರುವ ರಾಮಾಯಣದಲ್ಲಿ ಚಿತ್ರದಲ್ಲಿ ಯಶ್ ರಾವಣ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ(ವಿತರಣೆಯ ಪಾಲು ಮತ್ತು ಸಿನಿಮಾದ ಶುಲ್ಕ) ಇದೆ ಎಂದು ವರದಿಯಾಗಿದೆ. ಅಲ್ಲದೇ, ಈ ಚಿತ್ರದಲ್ಲಿನ ರಾಮನ ಪಾತ್ರಧಾರಿ ರಣಬೀರ್ ಕಪೂರ್ ಗಿಂತ ದುಪಟ್ಟು ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…