ಮುಂಬೈ: ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಮೊದಲ ಬಾರಿಗೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಕನ್ನಡದ ಸ್ಟಾರ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಹೌದು, ಅವರು ಬೇರೆ ಯಾರು ಅಲ್ಲ, ನಮ್ಮ ಕನ್ನಡ ಚಿತ್ರರಂಗದ ಖ್ಯಾತಿಯನ್ನು ವಿಶ್ವಾದ್ಯಂತ ಪಸರಿಸಿದ ಕೆಜಿಎಫ್ ಖ್ಯಾತಿ ರಾಕಿಂಗ್ ಸ್ಟಾರ್ ಯಶ್.
ಇತ್ತೀಚಿನ ದಿನಗಳಲ್ಲಿ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ಅಷ್ಟೇ ಅಲ್ಲ, ನಾಯಕರ ಸಂಭಾವನೆಯೂ ಹೆಚ್ಚಾಗಿರುವುದರಿಂದ ಖಳನಾಯಕರ ಸಂಭಾವನೆಯೂ ಹೆಚ್ಚಿದೆ. ಈಗ ಹೈ-ಬಜೆಟ್ ಚಿತ್ರಗಳಲ್ಲಿ ಮುಖ್ಯವಾಹಿನಿಯ ಹೀರೋಗಳು ವಿಲನ್ ಆಗುವ ಸಂಖ್ಯೆ ಹೆಚ್ಚುತ್ತಿದೆ. ಅವರಲ್ಲಿ ಕನ್ನಡದ ನಟರೊಬ್ಬರು ಚಿತ್ರವೊಂದಕ್ಕೆ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.
ಚಿತ್ರರಂಗದಲ್ಲಿ ಸಾಮಾನ್ಯವಾಗಿ ಬಿ-ಟೌನ್ ಮಂದಿಯೇ ಅತಿಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಬಳಿಕ ದಕ್ಷಿಣದ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್ ಮತ್ತು ಪ್ರಭಾಸ್ ಸೇರಿದಂತೆ ಹಲವು ನಟರು ದುಪಟ್ಟು ಸಂಭಾವನೆ ಪಡೆಯುತ್ತಿರುವುದು ವರದಿಯಾಗಿದೆ. ಇದೀಗ ಬಾಲಿವುಡ್ ನ್ ಶಾರುಖ್ ಖಾನ್, ಸಲ್ಮಾನ್, ರಣಬೀರ್ ಕಪೂರ್ ಸೇರಿದಂತೆ ದಕ್ಷಿಣ ನಟರ ಸಂಭಾವನೆಯನ್ನು ಮೀರಿಸಿ ನಮ್ಮ ಕನ್ನಡ ನಟ ಇತಿಹಾಸ ಬರೆದಿದ್ದಾರೆ.
ಬಾಲಿವುಡ್ ನ ನಿತೇಶ್ ತಿವಾರಿ ನಿರ್ದೇಶದಲ್ಲಿ ಮೂಡಿ ಬರುತ್ತಿರುವ ರಾಮಾಯಣದಲ್ಲಿ ಚಿತ್ರದಲ್ಲಿ ಯಶ್ ರಾವಣ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ(ವಿತರಣೆಯ ಪಾಲು ಮತ್ತು ಸಿನಿಮಾದ ಶುಲ್ಕ) ಇದೆ ಎಂದು ವರದಿಯಾಗಿದೆ. ಅಲ್ಲದೇ, ಈ ಚಿತ್ರದಲ್ಲಿನ ರಾಮನ ಪಾತ್ರಧಾರಿ ರಣಬೀರ್ ಕಪೂರ್ ಗಿಂತ ದುಪಟ್ಟು ಎಂದು ಹೇಳಲಾಗುತ್ತಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…