ಮನರಂಜನೆ

‘ಘಾಟಿ’ ಚಿತ್ರದ ಮೂಲಕ ವಿತರಣಾ ವಲಯಕ್ಕೆ ಕಾಲಿಟ್ಟ ಯಶ್‍ ತಾಯಿ

ಯಶ್‍ ತಾಯಿ ಪುಷ್ಪಾ ಅರುಣ್ ಕುಮಾರ್‍ ನಿರ್ಮಾಣದ ಮೊದಲ ಚಿತ್ರ ‘ಕೊತ್ತಲವಾಡಿ’ ಅಷ್ಟೇನೂ ಸದ್ದು ಮಾಡಲಿಲ್ಲ. ಈ ಚಿತ್ರದ ನಂತರ ಶರಣ್‍ ಅಭಿನಯದ ಚಿತ್ರವೊಂದನ್ನು ನಿರ್ಮಿಸುತ್ತಿರುವುದಾಗಿ ಪುಷ್ಪಾ ಅವರು ಈಗಾಗಲೇ ಘೋಷಿಸಿದ್ದಾರೆ. ಈ ಮಧ್ಯೆ, ಅವರು ವಿತರಣಾ ಕ್ಷೇತ್ರಕ್ಕೂ ಕಾಲಿಟಿದ್ದಾರೆ.

ನಿರ್ಮಾಪಕಿಯಾಗುವುದರ ಜೊತೆಗೆ ಇದೀಗ ವಿತರಕಿಯೂ ಆಗಿರುವ ಪುಷ್ಪಾ ಅವರು, ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರವನ್ನು ಕರ್ನಾಟಕಕ್ಕೆ ವಿತರಿಸುತ್ತಿದ್ದಾರೆ. ಈ ಚಿತ್ರವನ್ನು ಅವರು ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 5ರಂದು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ.

ವಿತರಣಾ ಕ್ಷೇತ್ರಕ್ಕೆ ಕಾಲಿಟ್ಟಿರುವ ಕುರಿತು ಮಾತನಾಡಿರುವ ಪುಷ್ಪಾ, ‘’ಫಾಟಿ’ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದೆ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು PA ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ವಿತರಕಿಯಾಗಿ ಇಟ್ಟಿರುವ ಹೊಸ ಹೆಜ್ಜೆಗೆ ಎಲ್ಲರ ಪ್ರೋತ್ಸಾಹವಿರಲಿ’ ಎಂದು ಮನವಿ ಮಾಡಿದ್ದಾರೆ.

‘ಘಾಟಿ’ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, UV ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ರಾಜೀವ್ ರೆಡ್ಡಿ ಮತ್ತು ಸಾಯಿ ಬಾಬು ಜಾಗರ್ಲಮುಡಿ ನಿರ್ಮಿಸಿದ್ದಾರೆ. ಈ ಚಿತ್ರವನ್ನು ಕ್ರಿಷ್‍ ಜಾಗರ್ಲಮುಡಿ ನಿರ್ದೇಶನ ಮಾಡುತ್ತಿದ್ದು, ‘ವೇದಂ’ ಯಶಸ್ಸಿನ ನಂತರ ಇದು ಅನುಷ್ಕಾ ಮತ್ತು ಕ್ರಿಷ್ ಅವರ ಎರಡನೇ‌ ಚಿತ್ರವಾಗಿದೆ. UV ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಇದು ಅನುಷ್ಕಾ ಅವರ ನಾಲ್ಕನೇ ಸಿನಿಮಾ.

ಮಾನವೀಯತೆ, ಜೀವನ ಹೋರಾಟ ಮತ್ತು ಮುಕ್ತಿಯ ಕುರಿತ ಕಥಾಹಂದರ ಹೊಂದಿರುವ ‘ಘಾಟಿ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಜೊತೆಗೆ ವಿಕ್ರಮ್ ಪ್ರಭು, ರಮ್ಯಾ ಕೃಷ್ಣ, ಜಗಪತಿ ಬಾಬು, ಜಾನ್‍ ವಿಜಯ್‍ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಮನೋಜ್ ರೆಡ್ಡಿ ಕಟ್ಟಾಸನಿ ಛಾಯಾಗ್ರಹಣ, ನಾಗವಲ್ಲಿಸ ವಿದ್ಯಾ ಸಾಗರ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

10 seconds ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

11 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

57 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

1 hour ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago