ಮನರಂಜನೆ

‘ಘಾಟಿ’ ಚಿತ್ರದ ಮೂಲಕ ವಿತರಣಾ ವಲಯಕ್ಕೆ ಕಾಲಿಟ್ಟ ಯಶ್‍ ತಾಯಿ

ಯಶ್‍ ತಾಯಿ ಪುಷ್ಪಾ ಅರುಣ್ ಕುಮಾರ್‍ ನಿರ್ಮಾಣದ ಮೊದಲ ಚಿತ್ರ ‘ಕೊತ್ತಲವಾಡಿ’ ಅಷ್ಟೇನೂ ಸದ್ದು ಮಾಡಲಿಲ್ಲ. ಈ ಚಿತ್ರದ ನಂತರ ಶರಣ್‍ ಅಭಿನಯದ ಚಿತ್ರವೊಂದನ್ನು ನಿರ್ಮಿಸುತ್ತಿರುವುದಾಗಿ ಪುಷ್ಪಾ ಅವರು ಈಗಾಗಲೇ ಘೋಷಿಸಿದ್ದಾರೆ. ಈ ಮಧ್ಯೆ, ಅವರು ವಿತರಣಾ ಕ್ಷೇತ್ರಕ್ಕೂ ಕಾಲಿಟಿದ್ದಾರೆ.

ನಿರ್ಮಾಪಕಿಯಾಗುವುದರ ಜೊತೆಗೆ ಇದೀಗ ವಿತರಕಿಯೂ ಆಗಿರುವ ಪುಷ್ಪಾ ಅವರು, ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರವನ್ನು ಕರ್ನಾಟಕಕ್ಕೆ ವಿತರಿಸುತ್ತಿದ್ದಾರೆ. ಈ ಚಿತ್ರವನ್ನು ಅವರು ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 5ರಂದು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ.

ವಿತರಣಾ ಕ್ಷೇತ್ರಕ್ಕೆ ಕಾಲಿಟ್ಟಿರುವ ಕುರಿತು ಮಾತನಾಡಿರುವ ಪುಷ್ಪಾ, ‘’ಫಾಟಿ’ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದೆ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು PA ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ವಿತರಕಿಯಾಗಿ ಇಟ್ಟಿರುವ ಹೊಸ ಹೆಜ್ಜೆಗೆ ಎಲ್ಲರ ಪ್ರೋತ್ಸಾಹವಿರಲಿ’ ಎಂದು ಮನವಿ ಮಾಡಿದ್ದಾರೆ.

‘ಘಾಟಿ’ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, UV ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ರಾಜೀವ್ ರೆಡ್ಡಿ ಮತ್ತು ಸಾಯಿ ಬಾಬು ಜಾಗರ್ಲಮುಡಿ ನಿರ್ಮಿಸಿದ್ದಾರೆ. ಈ ಚಿತ್ರವನ್ನು ಕ್ರಿಷ್‍ ಜಾಗರ್ಲಮುಡಿ ನಿರ್ದೇಶನ ಮಾಡುತ್ತಿದ್ದು, ‘ವೇದಂ’ ಯಶಸ್ಸಿನ ನಂತರ ಇದು ಅನುಷ್ಕಾ ಮತ್ತು ಕ್ರಿಷ್ ಅವರ ಎರಡನೇ‌ ಚಿತ್ರವಾಗಿದೆ. UV ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಇದು ಅನುಷ್ಕಾ ಅವರ ನಾಲ್ಕನೇ ಸಿನಿಮಾ.

ಮಾನವೀಯತೆ, ಜೀವನ ಹೋರಾಟ ಮತ್ತು ಮುಕ್ತಿಯ ಕುರಿತ ಕಥಾಹಂದರ ಹೊಂದಿರುವ ‘ಘಾಟಿ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಜೊತೆಗೆ ವಿಕ್ರಮ್ ಪ್ರಭು, ರಮ್ಯಾ ಕೃಷ್ಣ, ಜಗಪತಿ ಬಾಬು, ಜಾನ್‍ ವಿಜಯ್‍ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಮನೋಜ್ ರೆಡ್ಡಿ ಕಟ್ಟಾಸನಿ ಛಾಯಾಗ್ರಹಣ, ನಾಗವಲ್ಲಿಸ ವಿದ್ಯಾ ಸಾಗರ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

5 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

7 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

8 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

9 hours ago