ಮನರಂಜನೆ

‘ಮನಡ ಕಡಲು’ ಆಯ್ತು, ಈಗ ‘ಮತ್ತೆ ಮೊದಲಿಂದ’ ಬಂದ ಯೋಗರಾಜ್‍ ಭಟ್‍

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯೋಗರಾಜ್‍ ಭಟ್‍, ‘ಮತ್ತೆ ಮೊದಲಿನಿಂದ’ ಶುರು ಮಾಡಿದ್ದಾರೆ.

‘ಮತ್ತೆ ಮೊದಲಿನಿಂದ’ ಎನ್ನುವುದು ಯೋಗರಾಜ್‍ ಭಟ್‍ ಅವರ ಹೊಸ ಆಲ್ಬಂ. ಅವರು ಸದ್ದಿಲ್ಲದೆ ಒಂದು ವೀಡಿಯೋ ಆಲ್ಬಂ ನಿರ್ಮಿಸಿ-ನಿರ್ದೇಶಿಸಿದ್ದು, ಈ ಆಲ್ಬಂ ಮೂಲಕ ಸಂಜನ್‍ ಕಜೆ ಎಂಬ ಹೊಸ ಪ್ರತಿಭೆಯನ್ನ ಪರಿಚಯಿಸುತ್ತಿದ್ದಾರೆ. ಈ ಆಲ್ಬಂ ನಿರ್ಮಾಣದಲ್ಲಿ ಯೋಗರಾಜ್ ಭಟ್ ಅವರಿಗೆ ಶ್ರೀನಿಧಿ ಹಾಗೂ ಪ್ರಸನ್ನ ಸಹ ಜೊತೆಯಾಗಿದ್ದಾರೆ.

‘ಮತ್ತೆ ಮೊದಲಿಂದ’ ಆಲ್ಬಂನಲ್ಲಿ ನಾಲ್ಕು ಹಾಡುಗಳಿದ್ದು, ಈ ಆಲ್ಬಂನಲ್ಲಿ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ಮತ್ತು ನಿಧಿ ಸುಬ್ಬಯ್ಯ, ಅಮೀತ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಆಲ್ಬಂನ ‘ಮೋಹದ ಬಣ್ಣ ನೀಲಿ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ಸಂಯೋಜಿಸಿದ್ದಾರೆ.

ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕೂ ಗೀತೆಗಳನ್ನು ಒಬ್ಬೊಬ್ಬ ಸಂಗೀತ ನಿರ್ದೇಶಕ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡುಗಳನ್ನು ನಾಲ್ವರು ಗಾಯಕರು ಮತ್ತು ಗಾಯಕಿಯರು ಹಾಡಿರುವುದು ವಿಶೇಷ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್‌ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್‌.ಕುಲಾಲ್‌, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ.

ಸದ್ಯ ಒಂದು ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಮೂರು ಹಾಡುಗಳು ಹಂತಹಂತವಾಗಿ ಬಿಡುಗಡೆ ಆಗಲಿದೆ. ಈ ಹಾಡು ಪಂಚರಂಗಿ ಆಡಿಯೋದಲ್ಲಿ ಬಿಡುಗಡೆ ಆಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

4 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

4 hours ago