ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯೋಗರಾಜ್ ಭಟ್, ‘ಮತ್ತೆ ಮೊದಲಿನಿಂದ’ ಶುರು ಮಾಡಿದ್ದಾರೆ.
‘ಮತ್ತೆ ಮೊದಲಿನಿಂದ’ ಎನ್ನುವುದು ಯೋಗರಾಜ್ ಭಟ್ ಅವರ ಹೊಸ ಆಲ್ಬಂ. ಅವರು ಸದ್ದಿಲ್ಲದೆ ಒಂದು ವೀಡಿಯೋ ಆಲ್ಬಂ ನಿರ್ಮಿಸಿ-ನಿರ್ದೇಶಿಸಿದ್ದು, ಈ ಆಲ್ಬಂ ಮೂಲಕ ಸಂಜನ್ ಕಜೆ ಎಂಬ ಹೊಸ ಪ್ರತಿಭೆಯನ್ನ ಪರಿಚಯಿಸುತ್ತಿದ್ದಾರೆ. ಈ ಆಲ್ಬಂ ನಿರ್ಮಾಣದಲ್ಲಿ ಯೋಗರಾಜ್ ಭಟ್ ಅವರಿಗೆ ಶ್ರೀನಿಧಿ ಹಾಗೂ ಪ್ರಸನ್ನ ಸಹ ಜೊತೆಯಾಗಿದ್ದಾರೆ.
‘ಮತ್ತೆ ಮೊದಲಿಂದ’ ಆಲ್ಬಂನಲ್ಲಿ ನಾಲ್ಕು ಹಾಡುಗಳಿದ್ದು, ಈ ಆಲ್ಬಂನಲ್ಲಿ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ಮತ್ತು ನಿಧಿ ಸುಬ್ಬಯ್ಯ, ಅಮೀತ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಆಲ್ಬಂನ ‘ಮೋಹದ ಬಣ್ಣ ನೀಲಿ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ಸಂಯೋಜಿಸಿದ್ದಾರೆ.
ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕೂ ಗೀತೆಗಳನ್ನು ಒಬ್ಬೊಬ್ಬ ಸಂಗೀತ ನಿರ್ದೇಶಕ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡುಗಳನ್ನು ನಾಲ್ವರು ಗಾಯಕರು ಮತ್ತು ಗಾಯಕಿಯರು ಹಾಡಿರುವುದು ವಿಶೇಷ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್.ಕುಲಾಲ್, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ.
ಸದ್ಯ ಒಂದು ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಮೂರು ಹಾಡುಗಳು ಹಂತಹಂತವಾಗಿ ಬಿಡುಗಡೆ ಆಗಲಿದೆ. ಈ ಹಾಡು ಪಂಚರಂಗಿ ಆಡಿಯೋದಲ್ಲಿ ಬಿಡುಗಡೆ ಆಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…