ಮನರಂಜನೆ

‘ಮನಡ ಕಡಲು’ ಆಯ್ತು, ಈಗ ‘ಮತ್ತೆ ಮೊದಲಿಂದ’ ಬಂದ ಯೋಗರಾಜ್‍ ಭಟ್‍

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯೋಗರಾಜ್‍ ಭಟ್‍, ‘ಮತ್ತೆ ಮೊದಲಿನಿಂದ’ ಶುರು ಮಾಡಿದ್ದಾರೆ.

‘ಮತ್ತೆ ಮೊದಲಿನಿಂದ’ ಎನ್ನುವುದು ಯೋಗರಾಜ್‍ ಭಟ್‍ ಅವರ ಹೊಸ ಆಲ್ಬಂ. ಅವರು ಸದ್ದಿಲ್ಲದೆ ಒಂದು ವೀಡಿಯೋ ಆಲ್ಬಂ ನಿರ್ಮಿಸಿ-ನಿರ್ದೇಶಿಸಿದ್ದು, ಈ ಆಲ್ಬಂ ಮೂಲಕ ಸಂಜನ್‍ ಕಜೆ ಎಂಬ ಹೊಸ ಪ್ರತಿಭೆಯನ್ನ ಪರಿಚಯಿಸುತ್ತಿದ್ದಾರೆ. ಈ ಆಲ್ಬಂ ನಿರ್ಮಾಣದಲ್ಲಿ ಯೋಗರಾಜ್ ಭಟ್ ಅವರಿಗೆ ಶ್ರೀನಿಧಿ ಹಾಗೂ ಪ್ರಸನ್ನ ಸಹ ಜೊತೆಯಾಗಿದ್ದಾರೆ.

‘ಮತ್ತೆ ಮೊದಲಿಂದ’ ಆಲ್ಬಂನಲ್ಲಿ ನಾಲ್ಕು ಹಾಡುಗಳಿದ್ದು, ಈ ಆಲ್ಬಂನಲ್ಲಿ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ಮತ್ತು ನಿಧಿ ಸುಬ್ಬಯ್ಯ, ಅಮೀತ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಆಲ್ಬಂನ ‘ಮೋಹದ ಬಣ್ಣ ನೀಲಿ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ಸಂಯೋಜಿಸಿದ್ದಾರೆ.

ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕೂ ಗೀತೆಗಳನ್ನು ಒಬ್ಬೊಬ್ಬ ಸಂಗೀತ ನಿರ್ದೇಶಕ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡುಗಳನ್ನು ನಾಲ್ವರು ಗಾಯಕರು ಮತ್ತು ಗಾಯಕಿಯರು ಹಾಡಿರುವುದು ವಿಶೇಷ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್‌ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್‌.ಕುಲಾಲ್‌, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ.

ಸದ್ಯ ಒಂದು ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಮೂರು ಹಾಡುಗಳು ಹಂತಹಂತವಾಗಿ ಬಿಡುಗಡೆ ಆಗಲಿದೆ. ಈ ಹಾಡು ಪಂಚರಂಗಿ ಆಡಿಯೋದಲ್ಲಿ ಬಿಡುಗಡೆ ಆಗಿದೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

7 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

7 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

8 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

9 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

9 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 hours ago