ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯೋಗರಾಜ್ ಭಟ್, ‘ಮತ್ತೆ ಮೊದಲಿನಿಂದ’ ಶುರು ಮಾಡಿದ್ದಾರೆ.
‘ಮತ್ತೆ ಮೊದಲಿನಿಂದ’ ಎನ್ನುವುದು ಯೋಗರಾಜ್ ಭಟ್ ಅವರ ಹೊಸ ಆಲ್ಬಂ. ಅವರು ಸದ್ದಿಲ್ಲದೆ ಒಂದು ವೀಡಿಯೋ ಆಲ್ಬಂ ನಿರ್ಮಿಸಿ-ನಿರ್ದೇಶಿಸಿದ್ದು, ಈ ಆಲ್ಬಂ ಮೂಲಕ ಸಂಜನ್ ಕಜೆ ಎಂಬ ಹೊಸ ಪ್ರತಿಭೆಯನ್ನ ಪರಿಚಯಿಸುತ್ತಿದ್ದಾರೆ. ಈ ಆಲ್ಬಂ ನಿರ್ಮಾಣದಲ್ಲಿ ಯೋಗರಾಜ್ ಭಟ್ ಅವರಿಗೆ ಶ್ರೀನಿಧಿ ಹಾಗೂ ಪ್ರಸನ್ನ ಸಹ ಜೊತೆಯಾಗಿದ್ದಾರೆ.
‘ಮತ್ತೆ ಮೊದಲಿಂದ’ ಆಲ್ಬಂನಲ್ಲಿ ನಾಲ್ಕು ಹಾಡುಗಳಿದ್ದು, ಈ ಆಲ್ಬಂನಲ್ಲಿ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ಮತ್ತು ನಿಧಿ ಸುಬ್ಬಯ್ಯ, ಅಮೀತ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಆಲ್ಬಂನ ‘ಮೋಹದ ಬಣ್ಣ ನೀಲಿ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ಸಂಯೋಜಿಸಿದ್ದಾರೆ.
ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕೂ ಗೀತೆಗಳನ್ನು ಒಬ್ಬೊಬ್ಬ ಸಂಗೀತ ನಿರ್ದೇಶಕ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡುಗಳನ್ನು ನಾಲ್ವರು ಗಾಯಕರು ಮತ್ತು ಗಾಯಕಿಯರು ಹಾಡಿರುವುದು ವಿಶೇಷ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್.ಕುಲಾಲ್, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ.
ಸದ್ಯ ಒಂದು ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಮೂರು ಹಾಡುಗಳು ಹಂತಹಂತವಾಗಿ ಬಿಡುಗಡೆ ಆಗಲಿದೆ. ಈ ಹಾಡು ಪಂಚರಂಗಿ ಆಡಿಯೋದಲ್ಲಿ ಬಿಡುಗಡೆ ಆಗಿದೆ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…