ಮನರಂಜನೆ

ಯುವಕರ ಮನಸ್ಸು ಮತ್ತು ಕಡಲ ಕುರಿತು ಯೋಗರಾಜ್‍ ಭಟ್‍ ಹೊಸ ಚಿತ್ರ

ಇಂದಿನ ತಲೆಮಾರಿನ ಯುವಕ, ಯುವತಿಯರ ಯೋಚನೆ ಮತ್ತು ಮನಸ್ಥಿತಿಯನ್ನು ಹಿಡಿದಿಡುವ ಪ್ರಯತ್ನವನ್ನು ಯೋಗರಾಜ್‍ ಭಟ್‍ ಆಗಾಗ ಮಾಡುತ್ತಲೇ ಇರುತ್ತಾರೆ. ‘ಪಂಚರಂಗಿ’ ನಂತರ ಅವರು ಈ ತರಹದ ಸಿನಿಮಾ ಮಾಡಿರಲಿಲ್ಲ. ಈಗ ಸಣ್ಣ ಗ್ಯಾಪ್‍ನ ನಂತರ ಅವರು ಇಂದಿನ ತಲೆಮಾರಿನವರ ಚಿತ್ರವನ್ನು ಮಾಡುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ, ಈ ಬಾರಿ ಅವರ ಜೊತೆಗೆ ಇ. ಕೃಷ್ಣಪ್ಪ ಕೈಜೋಡಿಸಿದ್ದಾರೆ.

18 ವರ್ಷಗಳ ಹಿಂದೆ ಬಿಡುಗಡೆಯಾದ ‘ಮುಂಗಾರು ಮಳೆ’ ಚಿತ್ರವನ್ನು ಇದೇ ಕೃಷ್ಣಪ್ಪ ನಿರ್ಮಿಸಿದ್ದರು. ಅದೇ ಯೋಗರಾಜ್‍ ಭಟ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಈಗ ಪುನಃ ಅವರಿಬ್ಬರೂ ಜೊತೆಯಾಗಿದ್ದಾರೆ. ಸದ್ದಿಲ್ಲದೆ ‘ಮನದ ಕಡಲು’ ಎಂಬ ಚಿತ್ರವನ್ನು ಪ್ರಾರಂಭಿಸಿರುವ ಅವರು, ಈಗಾಗಲೇ ಶೇ. 95ರಷ್ಟು ಚಿತ್ರೀಕರಣವೂ ಆಗಿದೆ. ಇದೀಗ ಭಟ್ ಮತ್ತು ಚಿತ್ರತಂಡ ಮೊದಲ ಬಾರಿಗೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

‘ಮುಂಗಾರು ಮಳೆ’ ಮತ್ತು ‘ಮೊಗ್ಗಿನ ಮನಸ್ಸು’ ಚಿತ್ರಗಳ ನಂತರ ಈ ಬಾರಿ ಸಹ ಹೊಸ ಕುದುರೆಗಳ ಜೊತೆಗೆ ಸಿನಿಮಾ ಮಾಡೋಣ ಎಂದು ಹೇಳಿದರಂತೆ ಇ. ‘ಕೃಷ್ಣಪ್ಪ ಮೊದಲೇ ಹೊಸ ಕುದುರೆ ಜೊತೆಗೇ ಸಿನಿಮಾ ಮಾಡೋಣ ಎಂದರು. ಹೊಸಬರ ಜೊತೆಗೆ ಸಿನಿಮಾ ಮಾಡೋದು ಸುಲಭವಲ್ಲ. ಆದರೆ, ಹೊಸಬರ ಜೊತೆಗೆ ಕೆಲಸ ಮಾಡುವುದರಿಂದ ತುಂಬಾ ಕಲಿಯುತ್ತೇವೆ. ಅವರ ಎನರ್ಜಿ ಲೆವೆಲ್‍ ಅದ್ಭುತವಾಗಿರುತ್ತದೆ. ಇವತ್ತಿನ ಯುವಕರ ಮನಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದರೆ ಅವರ ಸಹವಾಸ ಮಾಡಬೇಕು’ ಎನ್ನುತ್ತಾರೆ ಯೋಗರಾಜ್‍ ಭಟ್‍.

‘ಮನದ ಕಡಲು’ ಎಂಬ ಹೆಸರೇ ಹೇಳುವಂತೆ ಚಿತ್ರದಲ್ಲಿ ಕಡಲು ಒಂದು ಪ್ರಮುಖ ಪಾತ್ರ ವಹಿಸುತ್ತದಂತೆ. ‘ನನಗೆ ಸಮುದ್ರ ಹೊಸದು. ಇದೇ ಮೊದಲ ಬಾರಿಗೆ ಚಿತ್ರದಲ್ಲಿ ಕಡಲನ್ನು ಇಷ್ಟೊಂದು ಬಳಸಿಕೊಂಡಿದ್ದೇನೆ. ಕಡಲು ನೋಡಿದರೆ ಕೀಳರಿಮೆ ಬರುತ್ತದೆ. ಪ್ರಕೃತಿ ಮುಂದೆ ನಾವೆಷ್ಟು ಚಿಕ್ಕವರು ಎಂದನಿಸುತ್ತದೆ. ಚಿತ್ರದ ಪಾತ್ರಗಳು ಕಡಲು ನೋಡಿ ಹೇಗೆ ತಮ್ಮ ಬದುಕನ್ನು ಹೇಗೆ ಸರಿ ಮಾಡಿಕೊಳ್ಳುತ್ತಾರೆ ಎನ್ನುವುದು ಚಿತ್ರದ ಕಥೆ’ ಎಂದರು.

‘ಮನದ ಕಡಲು’ ಚಿತ್ರಕ್ಕಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಮಹಾರಾಷ್ಟ್ರದ ಮುರುಡ್‍ ಜಂಜೀರ ಎಂಬ ಸಮುದ್ರದ ಮಧ್ಯದ ಕೋಟೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್‍ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದರೆ, ದತ್ತಣ್ಣ, ರಂಗಾಯಣ ರಘು ಮುಂತಾದ ಹಿರಿಯರಿದ್ದಾರೆ.

ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ, ಸಂತೋಷ್‍ ರೈ ಪಾತಾಜೆ ಛಾಯಾಗ್ರಹಣ, ಜಯಂತ್‍ ಕಾಯ್ಕಿಣಿ ಸಾಹಿತ್ಯವಿದೆ. ಇ.ಕೆ. ಎಂಟರ್‍ಟೈರ್ಸ್ ಬ್ಯಾನರ್ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಭೂಮಿಕಾ

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

2 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

2 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

2 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

2 hours ago